ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಪರ ಹೋರಾಟಗಳ ಒಕ್ಕೂಟ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷವು 135 ಸ್ಥಾನಗಳೊಂದಿಗೆ ಬಹುಮತ ಪಡೆದಿರುವ ಸಲುವಾಗಿ ಒಕ್ಕೂಟದ ವತಿಯಿಂದ ಮಂಗಳವಾರ ತಾಲ್ಲೂಕು ಕಚೇರಿ ವೃತ್ತದ ಬಳಿ ಪದಾಧಿಕಾರಿಗಳು ಜೈಕಾರ ಕೂಗಿ ಸಂಭ್ರಮಾಚರಣೆ ಮಾಡಿದರು.
ಒಕ್ಕೂಟದ ಅಧ್ಯಕ್ಷ ನಂಜುಂಡಯ್ಯ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆಯಿಂದಾಗಿ ಬಡ ಜನತೆ ಸಂಪೂರ್ಣ ತತ್ತರಿಸಿದ್ದರು. ಬಿಜೆಪಿಯ ದುರಾಡಳಿತಕ್ಕೆ ರಾಜ್ಯದ ಅಭಿವೃದ್ಧಿಯೂ ಕುಂಠಿತವಾಗಿತ್ತು. ಹೀಗಾಗಿ ಕಾಂಗ್ರೆಸ್ ಪಕ್ಷದ ಸಿದ್ಧಾಂತ ನಂಬಿ ನಮ್ಮ ಸಂಘಟನೆಯಿಂದ ಬೆಂಬಲ ಸೂಚಿಸಿದ್ದೇವು.
ಮುಂದೆ ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಬೆಲೆ ಏರಿಕೆ ತಡೆಹಾಕಿ, ಭ್ರಷ್ಟಾಚಾರ ರಹಿತ ಆಡಳಿತ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಅಧ್ಯಕ್ಷ ನಂಜುಂಡಯ್ಯ, ಕಾರ್ಯದರ್ಶಿ ಚೌಡಪ್ಪ, ಮಹಿಳಾ ಘಟಕ ಅಧ್ಯಕ್ಷೆ ಶಶಿಕಲಾ ಸೇರಿ ಇತರ ಪದಾಧಿಕಾರಿಗಳು ಇದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…