2023-24 ನೇ ಸಾಲಿನ ಆಯವ್ಯಯದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖಾ ವತಿಯಿಂದ ನೇಕಾರರಿಗೆ ನೀಡಲು ಹಾಗೂ ನಿರಂತರ ನೇಯ್ಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ವಿವಿಧ ಯೋಜನೆಗಳಾದ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆ, ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ 02 ವಿದ್ಯುತ್ ಮಗ್ಗ ಘಟಕ ಸ್ಥಾಪನೆ ಹಾಗೂ ಹೊಸ ಎಲೆಕ್ಟ್ರಾನಿಕ್ – ಜಕಾರ್ಡ್ ಖರೀದಿ ಮುಂತಾದ ಯೋಜನೆಗಳ ಅನುಷ್ಠಾನಕ್ಕಾಗಿ ಇಲಾಖಾ ವತಿಯಿಂದ ಅರ್ಹ ನೇಕಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಹಾಗೂ ಮಿಸಲಾತಿಯನ್ವಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಫಲಾನುಭವಿಯು ಬ್ಯಾಂಕಿನಲ್ಲಿ ಸಾಲ ಪಡೆದು ಘಟಕವನ್ನು ಸ್ಥಾಪಿಸಿದ ನಂತರ ಅರ್ಹತೆಯನುಸಾರ ಕೇಂದ್ರ ಕಛೇರಿಯಿಂದ ಮಂಜೂರಾದ ಭೌತಿಕ ಹಾಗೂ ಆರ್ಥಿಕ ಗುರಿಗೆ ಒಳಪಟ್ಟು ಮರುಪಾವತಿ ಆಧಾರದ ಮೇಲೆ ಸಹಾಯಧನ ಮಂಜೂರು ಮಾಡಲಾಗುವುದು.
ಫಲಾನುಭವಿಯು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಯನ್ನು ವೆಬ್ಸೈಟ್: njn.karnatakadht.org ಆನ್ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಆಪರೇಲ್ ಪಾರ್ಕ್ ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ ಭೇಟಿ ನೀಡಿ ಅಥವಾ ದೊರವಾಣಿ ಸಂಖ್ಯೆ 080-29501945 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…