ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24 ನೇ ಸಾಲಿನಿಂದ ನೇಕಾರರ ಸಹಕಾರ ಸಂಘಗಳು/ ಕೈಗಾರಿಕಾ ಸಹಕಾರ ಬ್ಯಾಂಕುಗಳು/ ಕೃಷಿಯೇತರ/ ಕೃಷಿ ಪತ್ತಿನ ಸಹಕಾರ ಸಂಘಗಳು / ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಇತರೆ ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ಮೂಲಕ ರಾಜ್ಯದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ, ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗಾಗಿ ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಸರ್ಕಾರದಿಂದ ಬಡ್ಡಿ ಸಹಾಯಧನವನ್ನು ನೀಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ.
ಈ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗೆ “ಶೂನ್ಯ” ಬಡ್ಡಿ ದರದಲ್ಲಿ ರೂ 2.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಸರ್ಕಾರದಿಂದ ಗರಿಷ್ಠ ಶೇಕಡ 11 ರಷ್ಟು ಬಡ್ಡಿ ಸಹಾಯಧನ ಮತ್ತು ಶೇ.3 ರ ಬಡ್ಡಿ ದರದಲ್ಲಿ ರೂ. 2.00 ಲಕ್ಷಗಳಿಂದ ರೂ. 5.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಗರಿಷ್ಠ ಶೇ. 8 ರಷ್ಟು ಬಡ್ಡಿ ಸಹಾಯಧನವನ್ನು ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಬಡ್ಡಿ ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಮುಂದುವರೆದು ರಾಜ್ಯದ ಸರ್ಕಾರಿ ಮತ್ತು ವಾಣಿಜ್ಯ ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಪಡೆಯುವ ಸಾಲದ ಮೇಲೆ ಶೇ.8% ರಷ್ಟು ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.
ಯೋಜನೆಯಡಿ ನೇಕಾರಿಕೆ ಮತ್ತು ನೇಕಾರರಿಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಸಾಲಗಳಿಗೆ ಮಾತ್ರ ನೇಕಾರರು ಅರ್ಹರಾಗಿರುತ್ತಾರೆ(ಕ್ಯಾಶ್ ಕ್ರಿಕೆಟ್ ಸಾಲಗಳನ್ನು ಹೊರತುಪಡಿಸಿ). ಯೋಜನೆಯಡಿ ಪ್ರತಿ ಕೈಮಗ್ಗ ಹಾಗೂ ಅದರ ಸಲಕರಣೆಗಳ ಖರೀದಿಗೆ ಗರಿಷ್ಠ ರೂ 50,000 ಗಳನ್ನು, ದುಡಿಮೆ ಬಂಡವಾಳಕ್ಕಾಗಿ ರೂ.30,000 ಗಳನ್ನು ಹಾಗೂ ಪ್ರತಿ ವಿದ್ಯುತ್ ಮಗ್ಗ ಖರೀದಿಗೆ ರೂ. 1,75,000ಗಳು, ದುಡಿಮೆ ಬಂಡವಾಳಕ್ಕಾಗಿ ರೂ. 60,000 ಸಾಲಗಳನ್ನು ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ವತಿಯಿಂದ ಪಡೆಯಬಹುದಾಗಿದೆ.
ಈ ಸಾಲ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಅರ್ಹ ನೇಕಾರರು ವೆಬ್ಸೈಟ್ https://dev.kardht.com/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಆನ್ಲೈನ್ನಲ್ಲಿ ಸಲ್ಲಿಸಲಾದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆ.ಐ.ಎ.ಡಿ.ಬಿ., ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ-561203 ಗೆ ಭೇಟಿ ನೀಡಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…