ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24 ನೇ ಸಾಲಿನಿಂದ ನೇಕಾರರ ಸಹಕಾರ ಸಂಘಗಳು/ ಕೈಗಾರಿಕಾ ಸಹಕಾರ ಬ್ಯಾಂಕುಗಳು/ ಕೃಷಿಯೇತರ/ ಕೃಷಿ ಪತ್ತಿನ ಸಹಕಾರ ಸಂಘಗಳು / ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಇತರೆ ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ಮೂಲಕ ರಾಜ್ಯದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ, ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗಾಗಿ ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಸರ್ಕಾರದಿಂದ ಬಡ್ಡಿ ಸಹಾಯಧನವನ್ನು ನೀಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ.

ಈ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗೆ “ಶೂನ್ಯ” ಬಡ್ಡಿ ದರದಲ್ಲಿ ರೂ 2.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಸರ್ಕಾರದಿಂದ ಗರಿಷ್ಠ ಶೇಕಡ 11 ರಷ್ಟು ಬಡ್ಡಿ ಸಹಾಯಧನ ಮತ್ತು ಶೇ.3 ರ ಬಡ್ಡಿ ದರದಲ್ಲಿ ರೂ. 2.00 ಲಕ್ಷಗಳಿಂದ ರೂ. 5.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಗರಿಷ್ಠ ಶೇ. 8 ರಷ್ಟು ಬಡ್ಡಿ ಸಹಾಯಧನವನ್ನು ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಬಡ್ಡಿ ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಮುಂದುವರೆದು ರಾಜ್ಯದ ಸರ್ಕಾರಿ ಮತ್ತು ವಾಣಿಜ್ಯ ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಪಡೆಯುವ ಸಾಲದ ಮೇಲೆ ಶೇ.8% ರಷ್ಟು ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.

ಯೋಜನೆಯಡಿ ನೇಕಾರಿಕೆ ಮತ್ತು ನೇಕಾರರಿಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಸಾಲಗಳಿಗೆ ಮಾತ್ರ ನೇಕಾರರು ಅರ್ಹರಾಗಿರುತ್ತಾರೆ(ಕ್ಯಾಶ್ ಕ್ರಿಕೆಟ್ ಸಾಲಗಳನ್ನು ಹೊರತುಪಡಿಸಿ). ಯೋಜನೆಯಡಿ ಪ್ರತಿ ಕೈಮಗ್ಗ ಹಾಗೂ ಅದರ ಸಲಕರಣೆಗಳ ಖರೀದಿಗೆ ಗರಿಷ್ಠ ರೂ 50,000 ಗಳನ್ನು, ದುಡಿಮೆ ಬಂಡವಾಳಕ್ಕಾಗಿ ರೂ.30,000 ಗಳನ್ನು ಹಾಗೂ ಪ್ರತಿ ವಿದ್ಯುತ್ ಮಗ್ಗ ಖರೀದಿಗೆ ರೂ. 1,75,000ಗಳು, ದುಡಿಮೆ ಬಂಡವಾಳಕ್ಕಾಗಿ ರೂ. 60,000 ಸಾಲಗಳನ್ನು ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ವತಿಯಿಂದ ಪಡೆಯಬಹುದಾಗಿದೆ.

ಈ ಸಾಲ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಅರ್ಹ ನೇಕಾರರು ವೆಬ್‌ಸೈಟ್ https://dev.kardht.com/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆ.ಐ.ಎ.ಡಿ.ಬಿ., ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ-561203 ಗೆ ಭೇಟಿ ನೀಡಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

14 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

15 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

19 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 day ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

1 day ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 days ago