ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24 ನೇ ಸಾಲಿನಿಂದ ನೇಕಾರರ ಸಹಕಾರ ಸಂಘಗಳು/ ಕೈಗಾರಿಕಾ ಸಹಕಾರ ಬ್ಯಾಂಕುಗಳು/ ಕೃಷಿಯೇತರ/ ಕೃಷಿ ಪತ್ತಿನ ಸಹಕಾರ ಸಂಘಗಳು / ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಇತರೆ ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ಮೂಲಕ ರಾಜ್ಯದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ, ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗಾಗಿ ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಸರ್ಕಾರದಿಂದ ಬಡ್ಡಿ ಸಹಾಯಧನವನ್ನು ನೀಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ.
ಈ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗೆ “ಶೂನ್ಯ” ಬಡ್ಡಿ ದರದಲ್ಲಿ ರೂ 2.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಸರ್ಕಾರದಿಂದ ಗರಿಷ್ಠ ಶೇಕಡ 11 ರಷ್ಟು ಬಡ್ಡಿ ಸಹಾಯಧನ ಮತ್ತು ಶೇ.3 ರ ಬಡ್ಡಿ ದರದಲ್ಲಿ ರೂ. 2.00 ಲಕ್ಷಗಳಿಂದ ರೂ. 5.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಗರಿಷ್ಠ ಶೇ. 8 ರಷ್ಟು ಬಡ್ಡಿ ಸಹಾಯಧನವನ್ನು ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಬಡ್ಡಿ ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಮುಂದುವರೆದು ರಾಜ್ಯದ ಸರ್ಕಾರಿ ಮತ್ತು ವಾಣಿಜ್ಯ ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಪಡೆಯುವ ಸಾಲದ ಮೇಲೆ ಶೇ.8% ರಷ್ಟು ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.
ಯೋಜನೆಯಡಿ ನೇಕಾರಿಕೆ ಮತ್ತು ನೇಕಾರರಿಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಸಾಲಗಳಿಗೆ ಮಾತ್ರ ನೇಕಾರರು ಅರ್ಹರಾಗಿರುತ್ತಾರೆ(ಕ್ಯಾಶ್ ಕ್ರಿಕೆಟ್ ಸಾಲಗಳನ್ನು ಹೊರತುಪಡಿಸಿ). ಯೋಜನೆಯಡಿ ಪ್ರತಿ ಕೈಮಗ್ಗ ಹಾಗೂ ಅದರ ಸಲಕರಣೆಗಳ ಖರೀದಿಗೆ ಗರಿಷ್ಠ ರೂ 50,000 ಗಳನ್ನು, ದುಡಿಮೆ ಬಂಡವಾಳಕ್ಕಾಗಿ ರೂ.30,000 ಗಳನ್ನು ಹಾಗೂ ಪ್ರತಿ ವಿದ್ಯುತ್ ಮಗ್ಗ ಖರೀದಿಗೆ ರೂ. 1,75,000ಗಳು, ದುಡಿಮೆ ಬಂಡವಾಳಕ್ಕಾಗಿ ರೂ. 60,000 ಸಾಲಗಳನ್ನು ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ವತಿಯಿಂದ ಪಡೆಯಬಹುದಾಗಿದೆ.
ಈ ಸಾಲ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಅರ್ಹ ನೇಕಾರರು ವೆಬ್ಸೈಟ್ https://dev.kardht.com/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಆನ್ಲೈನ್ನಲ್ಲಿ ಸಲ್ಲಿಸಲಾದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆ.ಐ.ಎ.ಡಿ.ಬಿ., ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ-561203 ಗೆ ಭೇಟಿ ನೀಡಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…