ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24 ನೇ ಸಾಲಿನಿಂದ ನೇಕಾರರ ಸಹಕಾರ ಸಂಘಗಳು/ ಕೈಗಾರಿಕಾ ಸಹಕಾರ ಬ್ಯಾಂಕುಗಳು/ ಕೃಷಿಯೇತರ/ ಕೃಷಿ ಪತ್ತಿನ ಸಹಕಾರ ಸಂಘಗಳು / ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಇತರೆ ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ಮೂಲಕ ರಾಜ್ಯದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ, ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗಾಗಿ ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಸರ್ಕಾರದಿಂದ ಬಡ್ಡಿ ಸಹಾಯಧನವನ್ನು ನೀಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ.

ಈ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗೆ “ಶೂನ್ಯ” ಬಡ್ಡಿ ದರದಲ್ಲಿ ರೂ 2.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಸರ್ಕಾರದಿಂದ ಗರಿಷ್ಠ ಶೇಕಡ 11 ರಷ್ಟು ಬಡ್ಡಿ ಸಹಾಯಧನ ಮತ್ತು ಶೇ.3 ರ ಬಡ್ಡಿ ದರದಲ್ಲಿ ರೂ. 2.00 ಲಕ್ಷಗಳಿಂದ ರೂ. 5.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಗರಿಷ್ಠ ಶೇ. 8 ರಷ್ಟು ಬಡ್ಡಿ ಸಹಾಯಧನವನ್ನು ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಬಡ್ಡಿ ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಮುಂದುವರೆದು ರಾಜ್ಯದ ಸರ್ಕಾರಿ ಮತ್ತು ವಾಣಿಜ್ಯ ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಪಡೆಯುವ ಸಾಲದ ಮೇಲೆ ಶೇ.8% ರಷ್ಟು ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.

ಯೋಜನೆಯಡಿ ನೇಕಾರಿಕೆ ಮತ್ತು ನೇಕಾರರಿಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಸಾಲಗಳಿಗೆ ಮಾತ್ರ ನೇಕಾರರು ಅರ್ಹರಾಗಿರುತ್ತಾರೆ(ಕ್ಯಾಶ್ ಕ್ರಿಕೆಟ್ ಸಾಲಗಳನ್ನು ಹೊರತುಪಡಿಸಿ). ಯೋಜನೆಯಡಿ ಪ್ರತಿ ಕೈಮಗ್ಗ ಹಾಗೂ ಅದರ ಸಲಕರಣೆಗಳ ಖರೀದಿಗೆ ಗರಿಷ್ಠ ರೂ 50,000 ಗಳನ್ನು, ದುಡಿಮೆ ಬಂಡವಾಳಕ್ಕಾಗಿ ರೂ.30,000 ಗಳನ್ನು ಹಾಗೂ ಪ್ರತಿ ವಿದ್ಯುತ್ ಮಗ್ಗ ಖರೀದಿಗೆ ರೂ. 1,75,000ಗಳು, ದುಡಿಮೆ ಬಂಡವಾಳಕ್ಕಾಗಿ ರೂ. 60,000 ಸಾಲಗಳನ್ನು ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ವತಿಯಿಂದ ಪಡೆಯಬಹುದಾಗಿದೆ.

ಈ ಸಾಲ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಅರ್ಹ ನೇಕಾರರು ವೆಬ್‌ಸೈಟ್ https://dev.kardht.com/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆ.ಐ.ಎ.ಡಿ.ಬಿ., ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ-561203 ಗೆ ಭೇಟಿ ನೀಡಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

14 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago