ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24 ನೇ ಸಾಲಿನಿಂದ ನೇಕಾರರ ಸಹಕಾರ ಸಂಘಗಳು/ ಕೈಗಾರಿಕಾ ಸಹಕಾರ ಬ್ಯಾಂಕುಗಳು/ ಕೃಷಿಯೇತರ/ ಕೃಷಿ ಪತ್ತಿನ ಸಹಕಾರ ಸಂಘಗಳು / ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಇತರೆ ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ಮೂಲಕ ರಾಜ್ಯದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ, ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗಾಗಿ ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಸರ್ಕಾರದಿಂದ ಬಡ್ಡಿ ಸಹಾಯಧನವನ್ನು ನೀಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ.

ಈ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗೆ “ಶೂನ್ಯ” ಬಡ್ಡಿ ದರದಲ್ಲಿ ರೂ 2.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಸರ್ಕಾರದಿಂದ ಗರಿಷ್ಠ ಶೇಕಡ 11 ರಷ್ಟು ಬಡ್ಡಿ ಸಹಾಯಧನ ಮತ್ತು ಶೇ.3 ರ ಬಡ್ಡಿ ದರದಲ್ಲಿ ರೂ. 2.00 ಲಕ್ಷಗಳಿಂದ ರೂ. 5.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಗರಿಷ್ಠ ಶೇ. 8 ರಷ್ಟು ಬಡ್ಡಿ ಸಹಾಯಧನವನ್ನು ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಬಡ್ಡಿ ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಮುಂದುವರೆದು ರಾಜ್ಯದ ಸರ್ಕಾರಿ ಮತ್ತು ವಾಣಿಜ್ಯ ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಪಡೆಯುವ ಸಾಲದ ಮೇಲೆ ಶೇ.8% ರಷ್ಟು ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.

ಯೋಜನೆಯಡಿ ನೇಕಾರಿಕೆ ಮತ್ತು ನೇಕಾರರಿಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಸಾಲಗಳಿಗೆ ಮಾತ್ರ ನೇಕಾರರು ಅರ್ಹರಾಗಿರುತ್ತಾರೆ(ಕ್ಯಾಶ್ ಕ್ರಿಕೆಟ್ ಸಾಲಗಳನ್ನು ಹೊರತುಪಡಿಸಿ). ಯೋಜನೆಯಡಿ ಪ್ರತಿ ಕೈಮಗ್ಗ ಹಾಗೂ ಅದರ ಸಲಕರಣೆಗಳ ಖರೀದಿಗೆ ಗರಿಷ್ಠ ರೂ 50,000 ಗಳನ್ನು, ದುಡಿಮೆ ಬಂಡವಾಳಕ್ಕಾಗಿ ರೂ.30,000 ಗಳನ್ನು ಹಾಗೂ ಪ್ರತಿ ವಿದ್ಯುತ್ ಮಗ್ಗ ಖರೀದಿಗೆ ರೂ. 1,75,000ಗಳು, ದುಡಿಮೆ ಬಂಡವಾಳಕ್ಕಾಗಿ ರೂ. 60,000 ಸಾಲಗಳನ್ನು ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ವತಿಯಿಂದ ಪಡೆಯಬಹುದಾಗಿದೆ.

ಈ ಸಾಲ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಅರ್ಹ ನೇಕಾರರು ವೆಬ್‌ಸೈಟ್ https://dev.kardht.com/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆ.ಐ.ಎ.ಡಿ.ಬಿ., ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ-561203 ಗೆ ಭೇಟಿ ನೀಡಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

6 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago