ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24 ನೇ ಸಾಲಿನಿಂದ ನೇಕಾರರ ಸಹಕಾರ ಸಂಘಗಳು/ ಕೈಗಾರಿಕಾ ಸಹಕಾರ ಬ್ಯಾಂಕುಗಳು/ ಕೃಷಿಯೇತರ/ ಕೃಷಿ ಪತ್ತಿನ ಸಹಕಾರ ಸಂಘಗಳು / ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಇತರೆ ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ಮೂಲಕ ರಾಜ್ಯದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ, ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗಾಗಿ ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಸರ್ಕಾರದಿಂದ ಬಡ್ಡಿ ಸಹಾಯಧನವನ್ನು ನೀಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ.

ಈ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗೆ “ಶೂನ್ಯ” ಬಡ್ಡಿ ದರದಲ್ಲಿ ರೂ 2.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಸರ್ಕಾರದಿಂದ ಗರಿಷ್ಠ ಶೇಕಡ 11 ರಷ್ಟು ಬಡ್ಡಿ ಸಹಾಯಧನ ಮತ್ತು ಶೇ.3 ರ ಬಡ್ಡಿ ದರದಲ್ಲಿ ರೂ. 2.00 ಲಕ್ಷಗಳಿಂದ ರೂ. 5.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಗರಿಷ್ಠ ಶೇ. 8 ರಷ್ಟು ಬಡ್ಡಿ ಸಹಾಯಧನವನ್ನು ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಬಡ್ಡಿ ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಮುಂದುವರೆದು ರಾಜ್ಯದ ಸರ್ಕಾರಿ ಮತ್ತು ವಾಣಿಜ್ಯ ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಪಡೆಯುವ ಸಾಲದ ಮೇಲೆ ಶೇ.8% ರಷ್ಟು ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.

ಯೋಜನೆಯಡಿ ನೇಕಾರಿಕೆ ಮತ್ತು ನೇಕಾರರಿಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಸಾಲಗಳಿಗೆ ಮಾತ್ರ ನೇಕಾರರು ಅರ್ಹರಾಗಿರುತ್ತಾರೆ(ಕ್ಯಾಶ್ ಕ್ರಿಕೆಟ್ ಸಾಲಗಳನ್ನು ಹೊರತುಪಡಿಸಿ). ಯೋಜನೆಯಡಿ ಪ್ರತಿ ಕೈಮಗ್ಗ ಹಾಗೂ ಅದರ ಸಲಕರಣೆಗಳ ಖರೀದಿಗೆ ಗರಿಷ್ಠ ರೂ 50,000 ಗಳನ್ನು, ದುಡಿಮೆ ಬಂಡವಾಳಕ್ಕಾಗಿ ರೂ.30,000 ಗಳನ್ನು ಹಾಗೂ ಪ್ರತಿ ವಿದ್ಯುತ್ ಮಗ್ಗ ಖರೀದಿಗೆ ರೂ. 1,75,000ಗಳು, ದುಡಿಮೆ ಬಂಡವಾಳಕ್ಕಾಗಿ ರೂ. 60,000 ಸಾಲಗಳನ್ನು ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ವತಿಯಿಂದ ಪಡೆಯಬಹುದಾಗಿದೆ.

ಈ ಸಾಲ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಅರ್ಹ ನೇಕಾರರು ವೆಬ್‌ಸೈಟ್ https://dev.kardht.com/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆ.ಐ.ಎ.ಡಿ.ಬಿ., ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ-561203 ಗೆ ಭೇಟಿ ನೀಡಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

14 minutes ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 hour ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

10 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

20 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

21 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago