ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ “ಕೈಮಗ್ಗ ಮೀಸಲಾತಿ ಅಧಿನಿಯಮ-1985” ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.
ಕೇಂದ್ರ ಸರ್ಕಾರವು ಕೈಮಗ್ಗ ಮೀಸಲಾತಿ ಅಧಿನಿಯಮ-1985 ಕಾಯ್ದೆಯನ್ನು ಜಾರಿಗೆ ತಂದಿದ್ದು ಈ ಕಾಯ್ದೆಯಡಿ ವಿದ್ಯುತ್ ಮಗ್ಗದಲ್ಲಿ ರೇಷ್ಮೆ ಸೀರೆ, ದೋತಿ, ಟವಲ್ ಮತ್ತು ಗಮ್ಚ, ಲುಂಗಿ, ಬೆಡ್ ಶೀಟ್, ಬೆಡ್ ಕವರ್, ಚಮಕಲಮ್, ಡ್ರೆಸ್ ಮೇಟಿರೀಯಲ್, ಕಂಬಳಿ, ಶಾಲ್, ಉಲ್ಲನ್ ಟ್ವೀಡ್, ಚಾದರ್ ಈ 11 ವಿವಿಧ ಬಗೆಯ ಉತ್ಪನ್ನಗಳನ್ನು ಉತ್ಪಾದಿಸುವಲ್ಲಿ ಮೀಸಲಾತಿ ಇರುವುದರ ಬಗ್ಗೆ ನೇಕಾರರಿಗೆ ಮಾಹಿತಿ ನೀಡಿದರು.
ದೊಡ್ಡಬಳ್ಳಾಪುರ ತಾಲ್ಲೂಕು ದಕ್ಷಿಣ ಭಾಗದಲ್ಲಿ ಭೌಗೋಳಿಕವಾಗಿ ಅತಿ ಹೆಚ್ಚು ನೇಕಾರಿಕೆ ಸಾಂದ್ರತೆ ಇರುವ ಪ್ರದೇಶವಾಗಿದ್ದು ಈ ಭಾಗದಲ್ಲಿ ಹೆಚ್ಚಾಗಿ ವಿದ್ಯುತ್ ಮಗ್ಗವನ್ನು ಅವಲಂಬಿಸಿ ನೇಕಾರರು ಜೀವನವನ್ನು ಸುಧಾರಿಸುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಸದರಿ ಮಗ್ಗಗಳಲ್ಲಿ ಮೀಸಲಿರಿಸಿರುವ ಉತ್ಪನ್ನಗಳನ್ನು ಹೊರತುಪಡಿಸಿ ಡೂಪೀಯಾನ್, ಎಲ್ ಟಿ ಪಾಲಿಸ್ಟಾರ್ ನಂತಹ ಇತರೆ ಉತ್ಪನ್ನಗಳನ್ನು ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳಬಹುದೆಂದು ನೇಕಾರರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರಾದೇಶಿಕ ಜಾರಿ ನಿರ್ದೇಶನಾಲಯದ ಅಧಿಕಾರಿ ಮನೋಹರ್, ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಎಂ, ಸಹಾಯಕ ನಿರ್ದೇಶಕರಾದ ಸುರೇಶ್ ಕುಮಾರ್ ಎಸ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಷನ್ಮುಗಂ, ನೇಕಾರರು ಉಪಸ್ಥಿತರಿದ್ದರು.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…