ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ “ಕೈಮಗ್ಗ ಮೀಸಲಾತಿ ಅಧಿನಿಯಮ-1985” ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.
ಕೇಂದ್ರ ಸರ್ಕಾರವು ಕೈಮಗ್ಗ ಮೀಸಲಾತಿ ಅಧಿನಿಯಮ-1985 ಕಾಯ್ದೆಯನ್ನು ಜಾರಿಗೆ ತಂದಿದ್ದು ಈ ಕಾಯ್ದೆಯಡಿ ವಿದ್ಯುತ್ ಮಗ್ಗದಲ್ಲಿ ರೇಷ್ಮೆ ಸೀರೆ, ದೋತಿ, ಟವಲ್ ಮತ್ತು ಗಮ್ಚ, ಲುಂಗಿ, ಬೆಡ್ ಶೀಟ್, ಬೆಡ್ ಕವರ್, ಚಮಕಲಮ್, ಡ್ರೆಸ್ ಮೇಟಿರೀಯಲ್, ಕಂಬಳಿ, ಶಾಲ್, ಉಲ್ಲನ್ ಟ್ವೀಡ್, ಚಾದರ್ ಈ 11 ವಿವಿಧ ಬಗೆಯ ಉತ್ಪನ್ನಗಳನ್ನು ಉತ್ಪಾದಿಸುವಲ್ಲಿ ಮೀಸಲಾತಿ ಇರುವುದರ ಬಗ್ಗೆ ನೇಕಾರರಿಗೆ ಮಾಹಿತಿ ನೀಡಿದರು.
ದೊಡ್ಡಬಳ್ಳಾಪುರ ತಾಲ್ಲೂಕು ದಕ್ಷಿಣ ಭಾಗದಲ್ಲಿ ಭೌಗೋಳಿಕವಾಗಿ ಅತಿ ಹೆಚ್ಚು ನೇಕಾರಿಕೆ ಸಾಂದ್ರತೆ ಇರುವ ಪ್ರದೇಶವಾಗಿದ್ದು ಈ ಭಾಗದಲ್ಲಿ ಹೆಚ್ಚಾಗಿ ವಿದ್ಯುತ್ ಮಗ್ಗವನ್ನು ಅವಲಂಬಿಸಿ ನೇಕಾರರು ಜೀವನವನ್ನು ಸುಧಾರಿಸುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಸದರಿ ಮಗ್ಗಗಳಲ್ಲಿ ಮೀಸಲಿರಿಸಿರುವ ಉತ್ಪನ್ನಗಳನ್ನು ಹೊರತುಪಡಿಸಿ ಡೂಪೀಯಾನ್, ಎಲ್ ಟಿ ಪಾಲಿಸ್ಟಾರ್ ನಂತಹ ಇತರೆ ಉತ್ಪನ್ನಗಳನ್ನು ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳಬಹುದೆಂದು ನೇಕಾರರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರಾದೇಶಿಕ ಜಾರಿ ನಿರ್ದೇಶನಾಲಯದ ಅಧಿಕಾರಿ ಮನೋಹರ್, ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಎಂ, ಸಹಾಯಕ ನಿರ್ದೇಶಕರಾದ ಸುರೇಶ್ ಕುಮಾರ್ ಎಸ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಷನ್ಮುಗಂ, ನೇಕಾರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…