ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ “ಕೈಮಗ್ಗ ಮೀಸಲಾತಿ ಅಧಿನಿಯಮ-1985” ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.
ಕೇಂದ್ರ ಸರ್ಕಾರವು ಕೈಮಗ್ಗ ಮೀಸಲಾತಿ ಅಧಿನಿಯಮ-1985 ಕಾಯ್ದೆಯನ್ನು ಜಾರಿಗೆ ತಂದಿದ್ದು ಈ ಕಾಯ್ದೆಯಡಿ ವಿದ್ಯುತ್ ಮಗ್ಗದಲ್ಲಿ ರೇಷ್ಮೆ ಸೀರೆ, ದೋತಿ, ಟವಲ್ ಮತ್ತು ಗಮ್ಚ, ಲುಂಗಿ, ಬೆಡ್ ಶೀಟ್, ಬೆಡ್ ಕವರ್, ಚಮಕಲಮ್, ಡ್ರೆಸ್ ಮೇಟಿರೀಯಲ್, ಕಂಬಳಿ, ಶಾಲ್, ಉಲ್ಲನ್ ಟ್ವೀಡ್, ಚಾದರ್ ಈ 11 ವಿವಿಧ ಬಗೆಯ ಉತ್ಪನ್ನಗಳನ್ನು ಉತ್ಪಾದಿಸುವಲ್ಲಿ ಮೀಸಲಾತಿ ಇರುವುದರ ಬಗ್ಗೆ ನೇಕಾರರಿಗೆ ಮಾಹಿತಿ ನೀಡಿದರು.
ದೊಡ್ಡಬಳ್ಳಾಪುರ ತಾಲ್ಲೂಕು ದಕ್ಷಿಣ ಭಾಗದಲ್ಲಿ ಭೌಗೋಳಿಕವಾಗಿ ಅತಿ ಹೆಚ್ಚು ನೇಕಾರಿಕೆ ಸಾಂದ್ರತೆ ಇರುವ ಪ್ರದೇಶವಾಗಿದ್ದು ಈ ಭಾಗದಲ್ಲಿ ಹೆಚ್ಚಾಗಿ ವಿದ್ಯುತ್ ಮಗ್ಗವನ್ನು ಅವಲಂಬಿಸಿ ನೇಕಾರರು ಜೀವನವನ್ನು ಸುಧಾರಿಸುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಸದರಿ ಮಗ್ಗಗಳಲ್ಲಿ ಮೀಸಲಿರಿಸಿರುವ ಉತ್ಪನ್ನಗಳನ್ನು ಹೊರತುಪಡಿಸಿ ಡೂಪೀಯಾನ್, ಎಲ್ ಟಿ ಪಾಲಿಸ್ಟಾರ್ ನಂತಹ ಇತರೆ ಉತ್ಪನ್ನಗಳನ್ನು ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳಬಹುದೆಂದು ನೇಕಾರರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರಾದೇಶಿಕ ಜಾರಿ ನಿರ್ದೇಶನಾಲಯದ ಅಧಿಕಾರಿ ಮನೋಹರ್, ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಎಂ, ಸಹಾಯಕ ನಿರ್ದೇಶಕರಾದ ಸುರೇಶ್ ಕುಮಾರ್ ಎಸ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಷನ್ಮುಗಂ, ನೇಕಾರರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…