ಕೈಮಗ್ಗ ಮೀಸಲಾತಿ ಅಧಿನಿಯಮ-1985 ರ ವಿದ್ಯುತ್ ಮಗ್ಗ ನೇಕಾರರಿಗೆ ಅರಿವು ಕಾರ್ಯಕ್ರಮ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ “ಕೈಮಗ್ಗ ಮೀಸಲಾತಿ ಅಧಿನಿಯಮ-1985” ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.

ಕೇಂದ್ರ ಸರ್ಕಾರವು ಕೈಮಗ್ಗ ಮೀಸಲಾತಿ ಅಧಿನಿಯಮ-1985 ಕಾಯ್ದೆಯನ್ನು ಜಾರಿಗೆ ತಂದಿದ್ದು ಈ ಕಾಯ್ದೆಯಡಿ ವಿದ್ಯುತ್ ಮಗ್ಗದಲ್ಲಿ ರೇಷ್ಮೆ ಸೀರೆ, ದೋತಿ, ಟವಲ್ ಮತ್ತು ಗಮ್‌ಚ, ಲುಂಗಿ, ಬೆಡ್ ಶೀಟ್, ಬೆಡ್ ಕವರ್, ಚಮಕಲಮ್, ಡ್ರೆಸ್ ಮೇಟಿರೀಯಲ್, ಕಂಬಳಿ, ಶಾಲ್, ಉಲ್ಲನ್ ಟ್ವೀಡ್, ಚಾದರ್ ಈ 11 ವಿವಿಧ ಬಗೆಯ ಉತ್ಪನ್ನಗಳನ್ನು ಉತ್ಪಾದಿಸುವಲ್ಲಿ ಮೀಸಲಾತಿ ಇರುವುದರ ಬಗ್ಗೆ ನೇಕಾರರಿಗೆ ಮಾಹಿತಿ ನೀಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ದಕ್ಷಿಣ ಭಾಗದಲ್ಲಿ ಭೌಗೋಳಿಕವಾಗಿ ಅತಿ ಹೆಚ್ಚು ನೇಕಾರಿಕೆ ಸಾಂದ್ರತೆ ಇರುವ ಪ್ರದೇಶವಾಗಿದ್ದು ಈ ಭಾಗದಲ್ಲಿ ಹೆಚ್ಚಾಗಿ ವಿದ್ಯುತ್ ಮಗ್ಗವನ್ನು ಅವಲಂಬಿಸಿ ನೇಕಾರರು ಜೀವನವನ್ನು ಸುಧಾರಿಸುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಸದರಿ ಮಗ್ಗಗಳಲ್ಲಿ ಮೀಸಲಿರಿಸಿರುವ ಉತ್ಪನ್ನಗಳನ್ನು ಹೊರತುಪಡಿಸಿ ಡೂಪೀಯಾನ್, ಎಲ್ ಟಿ ಪಾಲಿಸ್ಟಾರ್ ನಂತಹ ಇತರೆ ಉತ್ಪನ್ನಗಳನ್ನು ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳಬಹುದೆಂದು ನೇಕಾರರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರಾದೇಶಿಕ ಜಾರಿ ನಿರ್ದೇಶನಾಲಯದ ಅಧಿಕಾರಿ ಮನೋಹರ್, ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಎಂ, ಸಹಾಯಕ ನಿರ್ದೇಶಕರಾದ ಸುರೇಶ್ ಕುಮಾರ್ ಎಸ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಷನ್ಮುಗಂ, ನೇಕಾರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

5 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

6 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

7 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

8 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

12 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

13 hours ago