ಕೈಮುಗಿತೀನಿ, ಕಾಲಿಗೆ ಬೀಳ್ತೀನಿ ಅಂದ್ರೆ ಕಸ ಬರೋದು ನಿಲ್ಲಲ್ಲ- ಉಗ್ರ ಹೋರಾಟ ಮಾಡಿ‌ ಕಸ ನಿಲ್ಲಿಸಬೇಕು- ಶಾಸಕ ಧೀರಜ್‌ ಮುನಿರಾಜ್ ಡಿಕೆಶಿ ಕಾಲಿಗೆ ಬಿದ್ದಿರುವ ಉದ್ದೇಶವೇ ಬೇರೆ…..- ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರ ತಾಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ ಜಿಪಿ ಕಸ ವಿಲೇವಾರಿ ಘಟಕಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುವ ಕಸವನ್ನು ನಿಲ್ಲಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಾಲಿಗೆ ಶಾಸಕ ಧೀರಜ್ ಮುನಿರಾಜ್ ಅವರು “ಕಾಲಿಗೆ ಬಿದ್ದು” ನಮಸ್ಕರಿಸುತ್ತಾ ಮನವಿ ಮಾಡುವ ಬದಲು ಉಗ್ರ ಹೋರಾಟ ಮಾಡಿ ಹೊಸ ಕಸ ಬರುವುದನ್ನು ತಡೆಹಿಡಿಯಬೇಕು ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್ ಹೇಳಿದರು.

ಜೂನ್.21ರಂದು ಡಿಸಿಎಂ ಡಿಕೆಶಿ ಅವರು ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಪರಿಶೀಲನೆ ನಡೆಸಿ, ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸುವ ವೇಳೆ ಶಾಸಕ ಧೀರಜ್ ಮುನಿರಾಜ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಾಲಿಗೆ ಬಿದ್ದು ಬಿಬಿಎಂಪಿಯಿಂದ ತಾಲೂಕಿಗೆ ಬರುವ ಹೊಸ ಕಸವನ್ನು ನಿಲ್ಲಿಸುವಂತೆ ಕಾಲಿಗೆ ಬಿದ್ದು ಮನವಿ ಮಾಡಿದ್ದರು. ಈ ಕುರಿತು ಹುಸ್ಕೂರ್ ಆನಂದ್ ಅವರು ಪ್ರತಿಕ್ರಿಯೆ ನೀಡಿದರು.

ಇವರು ಕಾಲಿಗೆ ಬೀಳುತ್ತಿರುವುದನ್ನು ನೋಡುತ್ತಿದ್ದರೆ ಮುಂದೆ ಒಂದು ವೇಳೆ ಎನ್ ಡಿಎನಲ್ಲಿ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ನಲ್ಲಿ ಟಿಕೆಟ್ ಪಡೆಯಬಹುದು ಎಂಬ ಆಸೆಯಲ್ಲಿ ಬಿದ್ದಿರಬಹುದು ಎಂದು ನನಗೆ ವೈಯಕ್ತಿಕವಾಗಿ ಅನಿಸಿದೆ ಎಂದರು.

ಕೈಮುಗಿತೀನಿ, ಕಾಲಿಗೆ ಬೀಳ್ತೀನಿ ಕಸ ‌ನಿಲ್ಲಿಸಿ ಅನ್ನೋದ್ರಲ್ಲೇ ಇದ್ರೆ ಕಸ ಬರೋದನ್ನು ನಿಲ್ಲಿಸೋದಕ್ಕೆ ಆಗಲ್ಲ. ಉಗ್ರ ಹೋರಾಟ ಮಾಡಿ ಕಸ ಬರೋದನ್ನ ತಡೆಹಿಡಿಬೇಕು. ಮಂತ್ರಕ್ಕೆ ಮಾವಿನಕಾಯಿ ಉದುರುವಾಗಿದ್ದರೆ ಹೋರಾಟಗಳು ಏನಕ್ಕೆ ಬೇಕಿತ್ತು. ಕಸ ನಿಲ್ಲಿಸಲು ಶಾಸಕ ಧೀರಜ್ ಮುನಿರಾಜ್ ಅವರು ಹೋರಾಟ ಪ್ರಾರಂಭ ಮಾಡಿದರೆ ನಾವು ಪಕ್ಷಾತೀತವಾಗಿ ಸಹಕಾರ ನೀಡುತ್ತೇವೆ ಎಂದರು.

ಈ ಹಿಂದೆ ಹೊಸಕೋಟೆ ತಾಲೂಕಿನ ಮಂಡೂರು ಹಾಗೂ ಯಲಹಂಕದಲ್ಲಿ ಕಸ ಹಾಕುವುದಕ್ಕೆ ಹೋರಾಟ ಮಾಡಿ ನಿಲ್ಲಿಸಲಾಗಿದೆ. ಅದೇರೀತಿ ನಮ್ಮಲ್ಲೂ ನಿಲ್ಲಿಸಲು ಹೋರಾಟದ ಹಾದಿ ಹಿಡಿಯಬೇಕು. ವೋಟ್ ಬ್ಯಾಂಕ್ ಗಾಗಿ ಜನರ ಕಣ್ಣೋರಿಸಲು ಡಿಕೆಶಿ ಕಾಲಿಗೆ‌ ಬಿದ್ದು ನಾಟಕ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಧೀರಜ್ ಮುನಿರಾಜ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಾಲಿಗೆ ಬಿದ್ದಿರುವುದು ತಾಲೂಕಿನ ಜನತೆಗೆ ಅವಮಾನ ಮಾಡಿದಂತೆಯಾಗಿದೆ. ಕಾಲಿಗೆ ಬಿದ್ದಿರುವುದು ಒಂದು ರೀತಿ ನೆಪವಷ್ಟೆ, ಕಾಲಿಗೆ ಬಿದ್ರೆ ಕಸ ಬರೋದು ನಿಲ್ಲಲ್ಲ. ಹೋರಾಟ ಮಾಡೇ ಕಸ ನಿಲ್ಲಿಸಬೇಕು ಎಂದು ಹೇಳಿದರು.

2014ನೇ ಸಾಲಿನಲ್ಲಿ ನನ್ನ ಕಂಪನಿಗೆ ದಿನಕ್ಕೆ 100 ಟನ್ ಕಸ ಕೊಟ್ಟಿದ್ದರು. ಆದರೆ, ನಾನು ದೊಡ್ಡಬಳ್ಳಾಪುರ ಜನತೆಯ ಹಿತದೃಷ್ಟಿಯಿಂದ ಕಸ ತೆಗೆದುಕೊಂಡಿಲ್ಲ. ಅದೇರೀತಿ ಎಂಎಸ್ ಜಿಪಿ ಘಟಕಕ್ಕೆ ದಿನಕ್ಕೆ 500 ಟನ್ ಕಸ ಹಾಕಿಸಿಕೊಳ್ಳಲು ಅನುಮತಿ ಇದೆ. ಆದರೆ, ಅವರು ಹೆಚ್ಚುವರಿಯಾಗಿ ಕಸ ಹಾಕಿಸಿಕೊಳ್ಳುತ್ತಿದ್ದಾರೆ. ಅದರ ಬಗ್ಗೆ ಯಾರು ಮಾತನಾಡುತ್ತಿಲ್ಲ. ಪ್ರತಿ ದಿನ ನೂರಾರು ಲಾರಿಗಳು ಬಂದು ಕಸ ಸುರಿದು ಹೋಗುತ್ತಿವೆ.

ದೊಡ್ಡಬಳ್ಳಾಪುರದ ಜನತೆ ಮೂರ್ಖರು ಎಂದು ತಿಳಿದು, ವೋಟ್ ಹಾಕಿಸಿಕೊಳ್ಳಲು ಜನರ ಮುಂದೆ ಈ ರೀತಿ ನಾಟಕ ಮಾಡುತ್ತಿದ್ದಾರೆ. ಜನರಿಗೆ ಒಳ್ಳೆದನ್ನು ಮಾಡಲು ಮುಂದಾಗುತ್ತಿಲ್ಲ ಎಂದರು.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಮಾಡಲು ಕೇವಲ 600 ಕೋಟಿ ಖರ್ಚು ಮಾಡಿದರೆ ಸಾಕು. ಆದರೆ, 1600 ಕೋಟಿ ಖರ್ಚು ಮಾಡಲಾಗುತ್ತಿದೆ. ನಾವು ದೊಡ್ಡಬಳ್ಳಾಪುರಕ್ಕೆ ಬರುವ ಕಸವನ್ನು ನಿಲ್ಲಿಸಿದರೆ ಸರ್ಕಾರ ಎಚ್ಚೆತ್ತುಕೊಂಡು ಆಧುನಿಕವಾಗಿ ಕಸದಿಂದ ವಿದ್ಯುತ್, ಗ್ಯಾಸ್ ತಯಾರು ಮಾಡುವುದಕ್ಕೆ ಪ್ರಯತ್ನ ಪಡುತ್ತೆ. ಇಲ್ಲದಿದ್ದಲ್ಲಿ ಇಲ್ಲ ಎಂದರು.

ಒಂದು ನಮ್ಮ ಮನವಿಗೆ ಸ್ಪಂದಿಸದೇ ಕಸ ಹಾಕೋದನ್ನು ಮುಂದುವರಿಸಿದರೆ ಹೋರಾಟ ಮಾಡಬೇಕು, ಹೋರಾಟಕ್ಕೂ ಬಗ್ಗಲಿಲ್ಲ ಅಂದರೆ ಕೋರ್ಟ್ ಮೊರೆ ಹೋಗಿ‌ ನಿಲ್ಲಸಬೇಕು. ಅದನ್ನು ಬಿಟ್ಟು ಕೈಮುಗಿ, ಕಾಲಿಗೆ ಬೀಳು ಅಂದ್ರೆ ಆಗಲ್ಲ ಎಂದು ಹೇಳಿದರು.

ಬಾಶೆಟ್ಟಿಹಳ್ಳಿ ವಿಎಸ್ಎಸ್ಎನ್ ನಲ್ಲಿ 37 ಲಕ್ಷ ಹಗರಣ ನಡೆದಿದೆ. ಅದನ್ನು ತನಿಖೆ ಮಾಡಿಸಬೇಕು. ಕೆಎಂಎಫ್ ನಲ್ಲಿ 400 ಕೋಟಿ ರೂ. ಹಗರಣ ನಡೆದಿದೆ. ಅದನ್ನು ವಿಧಾನಸೌಧದಲ್ಲಿ ಮಾತನಾಡುತ್ತೇನೆ ಅಂದರೆ ಆ ಬಗ್ಗೆ ದಾಖಲಾತಿಗಳನ್ನು ನೀಡುತ್ತೇನೆ ಎಂದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

9 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

12 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

14 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

14 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

21 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

22 hours ago