‘ಕೈ’-ದಳ ಮೈತ್ರಿ ತೆಕ್ಕೆಗೆ ಕೊಡಿಗೇಹಳ್ಳಿ ಗ್ರಾ.ಪಂ.: ಅಧ್ಯಕ್ಷರಾಗಿ ಆಶಾರಾಣಿ, ಉಪಾಧ್ಯಕ್ಷೆಯಾಗಿ ಸೌಭಾಗ್ಯ ಆಯ್ಕೆ

ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯತಿ ಖ್ಯಾತಿಯ ಕೊಡಿಗೇಹಳ್ಳಿ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿವೆ.

ಒಟ್ಟು 34 ಸದಸ್ಯರನ್ನು ಒಳಗೊಂಡಿರುವ ಕೊಡಿಗೇಹಳ್ಳಿ ಗ್ರಾ.ಪಂ ಅಧ್ಯಕ್ಷೆ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಪಾಲನಜೋಗಿಹಳ್ಳಿ ಗ್ರಾಮದ ಸದಸ್ಯೆ ಆಶಾರಾಣಿ ನಾಗರಾಜು ಮತ್ತು ಅನುರಾಧ ನಾಮಪತ್ರ ಸಲ್ಲಿಸಿದ್ದರು. 21 ಮತಗಳನ್ನು ಪಡೆದ ಆಶಾರಾಣಿ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಕುರುಬರಹಳ್ಳಿ ವಾರ್ಡ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಸೌಭಾಗ್ಯ ಮಂಜುನಾಥ 20 ಮತಗಳನ್ನು ಪಡೆದು ಗೆಲುವು ಸಾಧಿಸಿದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಜೆಡಿಎಸ್ ಮುಖಂಡ ಬಿ.ಮುನೇಗೌಡ, ಕಾಂಗ್ರೆಸ್ ನ ಹಸನಘಟ್ಟ ರವಿ ಸೇರಿ ಮುಖಂಡರು ಅಭಿನಂದಿಸಿದರು.

ಬಳಿಕ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಸನಘಟ್ಟ ರವಿ ಮಾತನಾಡಿ, ಅಭಿವೃದ್ಧಿಯ ದೃಷ್ಟಿಯಿಂದ ನಾವು ಜೆಡಿಎಸ್ ಜೊತೆ ಕೈ ಜೋಡಿಸಿದ್ದೇವೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವತೋಮುಖ ಅಭಿವೃದ್ಧಿಗೆ ಪಕ್ಷಾತೀತವಾಗಿ ಕೆಲಸ ಮಾಡುವ ಒಡಂಬಡಿಕೆಯೊಂದಿಗೆ ಪರಸ್ಪರ ಒಂದಾಗಿದ್ದೇವೆ. ಸದಸ್ಯರು ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಚರಂಡಿ, ರಸ್ತೆ ಇತ್ಯಾದಿ‌ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದು, ಎಲ್ಲರೂ ಒಗ್ಗಟ್ಟಿನಿಂದ ಅಭಿವೃದ್ದಿಯಲ್ಲಿ ತೊಡಗಿಸಿಕೊಂಡಿದ್ದೇವೆ‌ ಎಂದು ಹೇಳಿದರು.

ಈ ವೇಳೆ ಮಾಜಿ ಉಪಾಧ್ಯಕ್ಷೆ ಗೌರಮ್ಮ, ಅರಸೇಗೌಡ, ಕಿಟ್ಟಿ, ವೆಂಕಟರಮಣ, ಪ್ರೇಮದಾಸ್, ಶ್ರೀನಿವಾಸ ಮತ್ತಿತರರು ಇದ್ದರು.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

1 hour ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

12 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

23 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

24 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

24 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago