ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಡಿ.ಕೊಂಗಾಡಿಯಪ್ಪ ಅವರು ನಿಸ್ವಾರ್ಥ ಸೇವಾಮನೋಭಾವದಿಂದ ದೊಡ್ಡಬಳ್ಳಾಪುರ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರ 163ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊಂಗಾಡಿಯಪ್ಪ ಅವರು ತಮ್ಮ ಸರಳತೆ, ಸಜ್ಜನಿಕೆ, ಸೇವಾ ಮನೋಭಾವ, ಪರಿಸರ ಪ್ರೇಮ, ಜನಪರ ಕಾಳಜಿಯಿಂದಾಗಿ ಮೈಸೂರು ಮಹಾರಾಜರು ಮತ್ತು ದಿವಾನರ ವಿಶ್ವಾಸ ಗಳಿಸಿದ್ದರು.
ಮಹಾರಾಜರು ಮತ್ತು ದಿವಾನರ ಗಮನವನ್ನು ದೊಡ್ಡಬಳ್ಳಾಪುರ ಅಭಿವೃದ್ಧಿಯ ಕಡೆಗೆ ಸೆಳೆದ ಕೊಂಗಾಡಿಯಪ್ಪನವರು, ದೊಡ್ಡಬಳ್ಳಾಪುರದಲ್ಲಿ ಪ್ರೌಢಶಾಲೆ, ಸಾರ್ವಜನಿಕ ಆಸ್ಪತ್ರೆ, ಪಶುವೈದ್ಯಶಾಲೆ, ಗೃಹಕೈಗಾರಿಕಾ ತರಬೇತಿ ಶಾಲೆ, ಮಹಿಳಾ ಸಮಾಜ ಕಟ್ಟಡದ ನಿಮಾರ್ಣವಾಗಲು ಸಾಧ್ಯವಾಯಿತು.
ದೊಡ್ಡಬಳ್ಳಾಪುರಕ್ಕೆ ವಿದ್ಯುಚ್ಛಕ್ತಿ ಬರಲು ಕಾರಣರಾದ ಇವರು, ಕೈಮಗ್ಗಗಳು ವಿದ್ಯುತ್ ಮಗ್ಗಗಳಾಗಲು ಸಾಧ್ಯವಾಯಿತು. ದೊಡ್ಡಬಳ್ಳಾಪುರ ಜನತೆ ಇಂದಿಗೂ ನಮ್ಮ ಊರಿನ ಪುಣ್ಯ ಪುರುಷ ಲೋಕಸೇವಾನಿರತ ಕೊಂಗಾಡಿಯಪ್ಪ ಎಂದು ಇಂದಿಗೂ ಸ್ಮರಿಸುತ್ತಿರುವುದು ಅವರ ಸಾಧನೆಗೆ ಸಾಕ್ಷಿಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಎ.ಬಿ.ಎಲ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸಿ. ನಿರ್ಮಲ ಕೊಂಗಾಡಿಯಪ್ಪನವರು ಇಂದಿನ ಯುವ ಪೀಳಿಗೆಗೆ ಪ್ರೇರಕ ಶಕ್ತಿಯಾಗಿದ್ದು, ಅವರ ಹಾದಿಯಲ್ಲಿ ಸಾಗುವ ಮೂಲಕ ನಮ್ಮ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದರು.
ಬಡ ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿ ಆಶ್ರಯ ನೀಡಿ ವಿದ್ಯಾಭ್ಯಾಸ ಸಹಕಾರ ನೀಡಿದವರು. ಸಾಲು ಮರಗಳನ್ನು ನೆಟ್ಟು ಬೆಳೆಸಿದವರು. ಊರಿಗೆ ಉಪಕಾರಿಯಾಗಿ ಬದುಕಿದವರು ಕೊಂಗಾಡಿಯಪ್ಪ ಅವರು ಎಂದರು. ಇದೇ ಸಂದರ್ಭದಲ್ಲಿ ಕೊಂಗಾಡಿಯಪ್ಪನವರನ್ನು ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಎಂ.ಎ.ಬಿ.ಎಲ್ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…