ಕೊಂಗಾಡಿಯಪ್ಪನವರ ನಿಸ್ವಾರ್ಥ ಸೇವಾ ಮನೋಭಾವದಿಂದ ದೊಡ್ಡಬಳ್ಳಾಪುರ ಅಭಿವೃದ್ಧಿ-ಜಿ.ಸುರೇಶ್

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಡಿ.ಕೊಂಗಾಡಿಯಪ್ಪ ಅವರು ನಿಸ್ವಾರ್ಥ ಸೇವಾಮನೋಭಾವದಿಂದ ದೊಡ್ಡಬಳ್ಳಾಪುರ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರ 163ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊಂಗಾಡಿಯಪ್ಪ ಅವರು ತಮ್ಮ ಸರಳತೆ, ಸಜ್ಜನಿಕೆ, ಸೇವಾ ಮನೋಭಾವ, ಪರಿಸರ ಪ್ರೇಮ, ಜನಪರ ಕಾಳಜಿಯಿಂದಾಗಿ ಮೈಸೂರು ಮಹಾರಾಜರು ಮತ್ತು ದಿವಾನರ ವಿಶ್ವಾಸ ಗಳಿಸಿದ್ದರು.

ಮಹಾರಾಜರು ಮತ್ತು ದಿವಾನರ ಗಮನವನ್ನು ದೊಡ್ಡಬಳ್ಳಾಪುರ ಅಭಿವೃದ್ಧಿಯ ಕಡೆಗೆ ಸೆಳೆದ ಕೊಂಗಾಡಿಯಪ್ಪನವರು, ದೊಡ್ಡಬಳ್ಳಾಪುರದಲ್ಲಿ ಪ್ರೌಢಶಾಲೆ, ಸಾರ್ವಜನಿಕ ಆಸ್ಪತ್ರೆ, ಪಶುವೈದ್ಯಶಾಲೆ, ಗೃಹಕೈಗಾರಿಕಾ ತರಬೇತಿ ಶಾಲೆ, ಮಹಿಳಾ ಸಮಾಜ ಕಟ್ಟಡದ ನಿಮಾರ್ಣವಾಗಲು ಸಾಧ್ಯವಾಯಿತು.

ದೊಡ್ಡಬಳ್ಳಾಪುರಕ್ಕೆ ವಿದ್ಯುಚ್ಛಕ್ತಿ ಬರಲು ಕಾರಣರಾದ ಇವರು, ಕೈಮಗ್ಗಗಳು ವಿದ್ಯುತ್ ಮಗ್ಗಗಳಾಗಲು ಸಾಧ್ಯವಾಯಿತು. ದೊಡ್ಡಬಳ್ಳಾಪುರ ಜನತೆ ಇಂದಿಗೂ ನಮ್ಮ ಊರಿನ ಪುಣ್ಯ ಪುರುಷ ಲೋಕಸೇವಾನಿರತ ಕೊಂಗಾಡಿಯಪ್ಪ ಎಂದು ಇಂದಿಗೂ ಸ್ಮರಿಸುತ್ತಿರುವುದು ಅವರ ಸಾಧನೆಗೆ ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಎ.ಬಿ.ಎಲ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸಿ. ನಿರ್ಮಲ ಕೊಂಗಾಡಿಯಪ್ಪನವರು ಇಂದಿನ ಯುವ ಪೀಳಿಗೆಗೆ ಪ್ರೇರಕ ಶಕ್ತಿಯಾಗಿದ್ದು, ಅವರ ಹಾದಿಯಲ್ಲಿ ಸಾಗುವ ಮೂಲಕ ನಮ್ಮ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದರು.

ಬಡ ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿ ಆಶ್ರಯ ನೀಡಿ ವಿದ್ಯಾಭ್ಯಾಸ ಸಹಕಾರ ನೀಡಿದವರು. ಸಾಲು ಮರಗಳನ್ನು ನೆಟ್ಟು ಬೆಳೆಸಿದವರು. ಊರಿಗೆ ಉಪಕಾರಿಯಾಗಿ ಬದುಕಿದವರು ಕೊಂಗಾಡಿಯಪ್ಪ ಅವರು ಎಂದರು. ಇದೇ ಸಂದರ್ಭದಲ್ಲಿ ಕೊಂಗಾಡಿಯಪ್ಪನವರನ್ನು ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಎಂ.ಎ.ಬಿ.ಎಲ್ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

13 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

13 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

16 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

2 days ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago