ಕೊಂಗಾಡಿಯಪ್ಪನವರ ನಿಸ್ವಾರ್ಥ ಸೇವಾ ಮನೋಭಾವದಿಂದ ದೊಡ್ಡಬಳ್ಳಾಪುರ ಅಭಿವೃದ್ಧಿ-ಜಿ.ಸುರೇಶ್

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಡಿ.ಕೊಂಗಾಡಿಯಪ್ಪ ಅವರು ನಿಸ್ವಾರ್ಥ ಸೇವಾಮನೋಭಾವದಿಂದ ದೊಡ್ಡಬಳ್ಳಾಪುರ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರ 163ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊಂಗಾಡಿಯಪ್ಪ ಅವರು ತಮ್ಮ ಸರಳತೆ, ಸಜ್ಜನಿಕೆ, ಸೇವಾ ಮನೋಭಾವ, ಪರಿಸರ ಪ್ರೇಮ, ಜನಪರ ಕಾಳಜಿಯಿಂದಾಗಿ ಮೈಸೂರು ಮಹಾರಾಜರು ಮತ್ತು ದಿವಾನರ ವಿಶ್ವಾಸ ಗಳಿಸಿದ್ದರು.

ಮಹಾರಾಜರು ಮತ್ತು ದಿವಾನರ ಗಮನವನ್ನು ದೊಡ್ಡಬಳ್ಳಾಪುರ ಅಭಿವೃದ್ಧಿಯ ಕಡೆಗೆ ಸೆಳೆದ ಕೊಂಗಾಡಿಯಪ್ಪನವರು, ದೊಡ್ಡಬಳ್ಳಾಪುರದಲ್ಲಿ ಪ್ರೌಢಶಾಲೆ, ಸಾರ್ವಜನಿಕ ಆಸ್ಪತ್ರೆ, ಪಶುವೈದ್ಯಶಾಲೆ, ಗೃಹಕೈಗಾರಿಕಾ ತರಬೇತಿ ಶಾಲೆ, ಮಹಿಳಾ ಸಮಾಜ ಕಟ್ಟಡದ ನಿಮಾರ್ಣವಾಗಲು ಸಾಧ್ಯವಾಯಿತು.

ದೊಡ್ಡಬಳ್ಳಾಪುರಕ್ಕೆ ವಿದ್ಯುಚ್ಛಕ್ತಿ ಬರಲು ಕಾರಣರಾದ ಇವರು, ಕೈಮಗ್ಗಗಳು ವಿದ್ಯುತ್ ಮಗ್ಗಗಳಾಗಲು ಸಾಧ್ಯವಾಯಿತು. ದೊಡ್ಡಬಳ್ಳಾಪುರ ಜನತೆ ಇಂದಿಗೂ ನಮ್ಮ ಊರಿನ ಪುಣ್ಯ ಪುರುಷ ಲೋಕಸೇವಾನಿರತ ಕೊಂಗಾಡಿಯಪ್ಪ ಎಂದು ಇಂದಿಗೂ ಸ್ಮರಿಸುತ್ತಿರುವುದು ಅವರ ಸಾಧನೆಗೆ ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಎ.ಬಿ.ಎಲ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸಿ. ನಿರ್ಮಲ ಕೊಂಗಾಡಿಯಪ್ಪನವರು ಇಂದಿನ ಯುವ ಪೀಳಿಗೆಗೆ ಪ್ರೇರಕ ಶಕ್ತಿಯಾಗಿದ್ದು, ಅವರ ಹಾದಿಯಲ್ಲಿ ಸಾಗುವ ಮೂಲಕ ನಮ್ಮ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದರು.

ಬಡ ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿ ಆಶ್ರಯ ನೀಡಿ ವಿದ್ಯಾಭ್ಯಾಸ ಸಹಕಾರ ನೀಡಿದವರು. ಸಾಲು ಮರಗಳನ್ನು ನೆಟ್ಟು ಬೆಳೆಸಿದವರು. ಊರಿಗೆ ಉಪಕಾರಿಯಾಗಿ ಬದುಕಿದವರು ಕೊಂಗಾಡಿಯಪ್ಪ ಅವರು ಎಂದರು. ಇದೇ ಸಂದರ್ಭದಲ್ಲಿ ಕೊಂಗಾಡಿಯಪ್ಪನವರನ್ನು ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಎಂ.ಎ.ಬಿ.ಎಲ್ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

19 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago