ಕೊಂಗಾಡಿಯಪ್ಪನವರ ನಿಸ್ವಾರ್ಥ ಸೇವಾ ಮನೋಭಾವದಿಂದ ದೊಡ್ಡಬಳ್ಳಾಪುರ ಅಭಿವೃದ್ಧಿ-ಜಿ.ಸುರೇಶ್

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಡಿ.ಕೊಂಗಾಡಿಯಪ್ಪ ಅವರು ನಿಸ್ವಾರ್ಥ ಸೇವಾಮನೋಭಾವದಿಂದ ದೊಡ್ಡಬಳ್ಳಾಪುರ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರ 163ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊಂಗಾಡಿಯಪ್ಪ ಅವರು ತಮ್ಮ ಸರಳತೆ, ಸಜ್ಜನಿಕೆ, ಸೇವಾ ಮನೋಭಾವ, ಪರಿಸರ ಪ್ರೇಮ, ಜನಪರ ಕಾಳಜಿಯಿಂದಾಗಿ ಮೈಸೂರು ಮಹಾರಾಜರು ಮತ್ತು ದಿವಾನರ ವಿಶ್ವಾಸ ಗಳಿಸಿದ್ದರು.

ಮಹಾರಾಜರು ಮತ್ತು ದಿವಾನರ ಗಮನವನ್ನು ದೊಡ್ಡಬಳ್ಳಾಪುರ ಅಭಿವೃದ್ಧಿಯ ಕಡೆಗೆ ಸೆಳೆದ ಕೊಂಗಾಡಿಯಪ್ಪನವರು, ದೊಡ್ಡಬಳ್ಳಾಪುರದಲ್ಲಿ ಪ್ರೌಢಶಾಲೆ, ಸಾರ್ವಜನಿಕ ಆಸ್ಪತ್ರೆ, ಪಶುವೈದ್ಯಶಾಲೆ, ಗೃಹಕೈಗಾರಿಕಾ ತರಬೇತಿ ಶಾಲೆ, ಮಹಿಳಾ ಸಮಾಜ ಕಟ್ಟಡದ ನಿಮಾರ್ಣವಾಗಲು ಸಾಧ್ಯವಾಯಿತು.

ದೊಡ್ಡಬಳ್ಳಾಪುರಕ್ಕೆ ವಿದ್ಯುಚ್ಛಕ್ತಿ ಬರಲು ಕಾರಣರಾದ ಇವರು, ಕೈಮಗ್ಗಗಳು ವಿದ್ಯುತ್ ಮಗ್ಗಗಳಾಗಲು ಸಾಧ್ಯವಾಯಿತು. ದೊಡ್ಡಬಳ್ಳಾಪುರ ಜನತೆ ಇಂದಿಗೂ ನಮ್ಮ ಊರಿನ ಪುಣ್ಯ ಪುರುಷ ಲೋಕಸೇವಾನಿರತ ಕೊಂಗಾಡಿಯಪ್ಪ ಎಂದು ಇಂದಿಗೂ ಸ್ಮರಿಸುತ್ತಿರುವುದು ಅವರ ಸಾಧನೆಗೆ ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಎ.ಬಿ.ಎಲ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸಿ. ನಿರ್ಮಲ ಕೊಂಗಾಡಿಯಪ್ಪನವರು ಇಂದಿನ ಯುವ ಪೀಳಿಗೆಗೆ ಪ್ರೇರಕ ಶಕ್ತಿಯಾಗಿದ್ದು, ಅವರ ಹಾದಿಯಲ್ಲಿ ಸಾಗುವ ಮೂಲಕ ನಮ್ಮ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದರು.

ಬಡ ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿ ಆಶ್ರಯ ನೀಡಿ ವಿದ್ಯಾಭ್ಯಾಸ ಸಹಕಾರ ನೀಡಿದವರು. ಸಾಲು ಮರಗಳನ್ನು ನೆಟ್ಟು ಬೆಳೆಸಿದವರು. ಊರಿಗೆ ಉಪಕಾರಿಯಾಗಿ ಬದುಕಿದವರು ಕೊಂಗಾಡಿಯಪ್ಪ ಅವರು ಎಂದರು. ಇದೇ ಸಂದರ್ಭದಲ್ಲಿ ಕೊಂಗಾಡಿಯಪ್ಪನವರನ್ನು ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಎಂ.ಎ.ಬಿ.ಎಲ್ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

19 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago