ಕೊಂಡಸಂದ್ರ ಕಾಶಿ ವಿಶ್ವನಾಥ ದೇವಾಲಯ ಕಲ್ಯಾಣಿ ಸ್ವಚ್ಚತೆ

ಪ್ರಧಾನಿ ನರೇಂದ್ರ ಮೋದಿ ಅವರು 75 ವಸಂತಗಳನ್ನು ಪೂರೈಸಿ 76ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹಲವಾರು ಗಣ್ಯರು ಮತ್ತು ರಾಜಕಾರಣಿಗಳು ಅವರ ನಾಯಕತ್ವವನ್ನು ಶ್ಲಾಘಿಸುತ್ತಿದ್ದಾರೆ. ಆಡಳಿತಾರೂಢ ಬಿಜೆಪಿ ತನ್ನ ಪ್ರಮುಖ ನಾಯಕನ ಜನ್ಮದಿನವನ್ನು ಗುರುತಿಸಲು ಹದಿನೈದು ವಾರಗಳ ಕಾಲ “ಸೇವಾ ಪಾಕ್ಷಿಕ”ಅಭಿಯಾನವನ್ನು ಆರಂಭಿಸಲಾಗಿದೆ ಎಂದು ದೇವನಹಳ್ಳಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಅಂಬರೀಶ್ ಗೌಡ ಹೇಳಿದರು.

ಈ ಹಿನ್ನೆಲೆ ಇಂದು ಪುರಾತನ ದೇವಾಲಯಗಳ ಸ್ವಚ್ಚತಾ ಸಮಿತಿ ವತಿಯಿಂದ ಗಿಡ ನೆಡುವುದು, ಸ್ವಚ್ಚತಾ ಕಾರ್ಯವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಸಮೀಪದ ಕೊಂಡಸಂದ್ರ ಗ್ರಾಮದಲ್ಲಿರುವ ಕಾಶಿ ವಿಶ್ವನಾಥ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಭಾಗವಹಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಅಕ್ಟೋಬರ್ 2 ರವರೆಗೆ ದೇಶಾದ್ಯಂತ ಆರೋಗ್ಯ ಶಿಬಿರಗಳಿಂದ ಹಿಡಿದು ಸ್ವಚ್ಛತಾ ಅಭಿಯಾನ, ಬುದ್ಧಿಜೀವಿಗಳ ಸಭೆಗಳು ಮತ್ತು ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಲು ಮೇಳಗಳವರೆಗೆ ಹಲವಾರು ಪ್ರಚಾರ, ಕಲ್ಯಾಣ, ಅಭಿವೃದ್ಧಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದರು.

ನಂತರ ವಕೀಲ ಪ್ರತಾಪ್ ಮಾತನಾಡಿ, ಸ್ವಯಂ ಸೇವಕರು, ತೂಬಗೆರೆ ಸುತ್ತಮುತ್ತಲಿನ ಸಾರ್ವಜನಿಕರು ಸೇರಿದಂತೆ ರಾಜಕೀಯ ಮುಖಂಡರು ಪುರಾತನ ಕಲ್ಯಾಣಿ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಇಂದು ಬೆಳಗ್ಗೆಯಿಂದಲೂ ನೂರಕ್ಕೂ ಹೆಚ್ಚು ಸ್ವಯಂ ಸೇವಕರಿಂದ ಕಲ್ಯಾಣಿ ಸ್ವಚ್ಚತಾ ಕಾರ್ಯ ನಡೆಯಿತು‌. ಕಲ್ಯಾಣಿಗಳ ಸ್ವಚ್ಚತೆಯಿಂದ ಮಳೆ ನೀರು ನಿಂತು ಅಂತರ್ಜಲ ಅಭಿವೃದ್ಧಿಯಾಗುವ ಉದ್ದೇಶದಿಂದ ಸ್ವಚ್ಚತೆ ಮಾಡಲಾಯಿತು ಎಂದರು.

ನಂತರ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ(ಕಿಟ್ಟಿ) ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನದ ಅಂಗವಾಗಿ ಇಂದು ಕೊಂಡಸಂದ್ರದ ಕಾಶಿ ವಿಶ್ವನಾಥ ದೇವಾಲಯದ ಕಲ್ಯಾಣಿ ಸ್ವಚ್ಛತಾ ಕಾರ್ಯ ಹಾಗೂ ಗಿಡ ನೆಡುವ ಕಾರ್ಯವನ್ನು ಹಮ್ಮಿಕೊಳ್ಳಾಗಿದೆ. ಕಾಲಕಾಲಕ್ಕೆ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿದರೆ ಅಂರ್ಜಲ ಮಟ್ಟ ಹೆಚ್ಚಾಗುತ್ತದೆ. ದೇವಾಲಯಕ್ಕೆ ಬರುವ ಭಕ್ತಾಧಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು.

ಈ ವೇಳೆ ಪ್ರಧಾನ ಕಾರ್ಯದರ್ಶಿ ರವಿ, ಓಬ್ದೇನಹಳ್ಳಿ‌ ಮುನಿಯಪ್ಪ, ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಮುಖಂಡರು, ಸ್ವಯಂಸೇವಕರು ಸೇರಿದಂತೆ ಪುರಾತನ ದೇವಾಲಯಗಳ ಸ್ವಚ್ಚತಾ ಸಮಿತಿ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

10 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

10 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

11 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

14 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

20 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

21 hours ago