ಪ್ರಧಾನಿ ನರೇಂದ್ರ ಮೋದಿ ಅವರು 75 ವಸಂತಗಳನ್ನು ಪೂರೈಸಿ 76ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹಲವಾರು ಗಣ್ಯರು ಮತ್ತು ರಾಜಕಾರಣಿಗಳು ಅವರ ನಾಯಕತ್ವವನ್ನು ಶ್ಲಾಘಿಸುತ್ತಿದ್ದಾರೆ. ಆಡಳಿತಾರೂಢ ಬಿಜೆಪಿ ತನ್ನ ಪ್ರಮುಖ ನಾಯಕನ ಜನ್ಮದಿನವನ್ನು ಗುರುತಿಸಲು ಹದಿನೈದು ವಾರಗಳ ಕಾಲ “ಸೇವಾ ಪಾಕ್ಷಿಕ”ಅಭಿಯಾನವನ್ನು ಆರಂಭಿಸಲಾಗಿದೆ ಎಂದು ದೇವನಹಳ್ಳಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಅಂಬರೀಶ್ ಗೌಡ ಹೇಳಿದರು.
ಈ ಹಿನ್ನೆಲೆ ಇಂದು ಪುರಾತನ ದೇವಾಲಯಗಳ ಸ್ವಚ್ಚತಾ ಸಮಿತಿ ವತಿಯಿಂದ ಗಿಡ ನೆಡುವುದು, ಸ್ವಚ್ಚತಾ ಕಾರ್ಯವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಸಮೀಪದ ಕೊಂಡಸಂದ್ರ ಗ್ರಾಮದಲ್ಲಿರುವ ಕಾಶಿ ವಿಶ್ವನಾಥ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಅಕ್ಟೋಬರ್ 2 ರವರೆಗೆ ದೇಶಾದ್ಯಂತ ಆರೋಗ್ಯ ಶಿಬಿರಗಳಿಂದ ಹಿಡಿದು ಸ್ವಚ್ಛತಾ ಅಭಿಯಾನ, ಬುದ್ಧಿಜೀವಿಗಳ ಸಭೆಗಳು ಮತ್ತು ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಲು ಮೇಳಗಳವರೆಗೆ ಹಲವಾರು ಪ್ರಚಾರ, ಕಲ್ಯಾಣ, ಅಭಿವೃದ್ಧಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದರು.
ನಂತರ ವಕೀಲ ಪ್ರತಾಪ್ ಮಾತನಾಡಿ, ಸ್ವಯಂ ಸೇವಕರು, ತೂಬಗೆರೆ ಸುತ್ತಮುತ್ತಲಿನ ಸಾರ್ವಜನಿಕರು ಸೇರಿದಂತೆ ರಾಜಕೀಯ ಮುಖಂಡರು ಪುರಾತನ ಕಲ್ಯಾಣಿ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಇಂದು ಬೆಳಗ್ಗೆಯಿಂದಲೂ ನೂರಕ್ಕೂ ಹೆಚ್ಚು ಸ್ವಯಂ ಸೇವಕರಿಂದ ಕಲ್ಯಾಣಿ ಸ್ವಚ್ಚತಾ ಕಾರ್ಯ ನಡೆಯಿತು. ಕಲ್ಯಾಣಿಗಳ ಸ್ವಚ್ಚತೆಯಿಂದ ಮಳೆ ನೀರು ನಿಂತು ಅಂತರ್ಜಲ ಅಭಿವೃದ್ಧಿಯಾಗುವ ಉದ್ದೇಶದಿಂದ ಸ್ವಚ್ಚತೆ ಮಾಡಲಾಯಿತು ಎಂದರು.
ನಂತರ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ(ಕಿಟ್ಟಿ) ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನದ ಅಂಗವಾಗಿ ಇಂದು ಕೊಂಡಸಂದ್ರದ ಕಾಶಿ ವಿಶ್ವನಾಥ ದೇವಾಲಯದ ಕಲ್ಯಾಣಿ ಸ್ವಚ್ಛತಾ ಕಾರ್ಯ ಹಾಗೂ ಗಿಡ ನೆಡುವ ಕಾರ್ಯವನ್ನು ಹಮ್ಮಿಕೊಳ್ಳಾಗಿದೆ. ಕಾಲಕಾಲಕ್ಕೆ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿದರೆ ಅಂರ್ಜಲ ಮಟ್ಟ ಹೆಚ್ಚಾಗುತ್ತದೆ. ದೇವಾಲಯಕ್ಕೆ ಬರುವ ಭಕ್ತಾಧಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು.
ಈ ವೇಳೆ ಪ್ರಧಾನ ಕಾರ್ಯದರ್ಶಿ ರವಿ, ಓಬ್ದೇನಹಳ್ಳಿ ಮುನಿಯಪ್ಪ, ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಮುಖಂಡರು, ಸ್ವಯಂಸೇವಕರು ಸೇರಿದಂತೆ ಪುರಾತನ ದೇವಾಲಯಗಳ ಸ್ವಚ್ಚತಾ ಸಮಿತಿ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…