ಕೊಟ್ಟಿಗೆಮಾಚೇನಹಳ್ಳಿಯಲ್ಲಿ ಮುಂದುವರಿದ ಚಿರತೆ ಅಟ್ಟಹಾಸ: ಇಂದು ಸಂಜೆ ಮತ್ತೊಂದು ಕುರಿ ಮೇಲೆ ದಾಳಿ ನಡೆಸಿದ ಚಿರತೆ

ದೊಡ್ಡಬಳ್ಳಾಪುರ ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿಯಲ್ಲಿ ಚಿರತೆ ಅಟ್ಟಹಾಸ ಮುಂದುವರಿದಿದೆ. ನಿನ್ನೆ ರಾತ್ರಿಯಷ್ಟೇ ಚಿರತೆ ಊರಿಗೆ ಲಗ್ಗೆ ಇಟ್ಟು ಕೊಟ್ಟಿಗೆಯಲ್ಲಿದ್ದ ಸುಮಾರು 9 ಕುರಿಗಳ ಮೇಲೆ ದಾಳಿ ನಡೆಸಿ 4 ಕುರಿಗಳನ್ನು ಬಲಿ ಪಡೆದಿತ್ತು. ಇದೀಗ ಇಂದು ಸಂಜೆ ಮತ್ತೊಂದು ಕುರಿ ಮೇಲೆ ದಾಳಿ ನಡೆಸಿ ಗಾಯಪಡಿಸಿದೆ.

ರೈತ ಮಹಿಳೆ ರಾಧಮ್ಮ ಎನ್ನುವವರು ತಮ್ಮ ಹೊಲದ ಬಳಿ ಕುರಿಗಳನ್ನು ಮೇಯಲು ಬಿಟ್ಟು ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮಧ್ಯಾಹ್ನ ಸುಮಾರು 3:30ರಲ್ಲಿ ಕುರಿಗಳ ಮೇಲೆ ಚಿರತೆ ಎರಗಿ ಒಂದು ಕುರಿಯನ್ನು ಎಳೆದೊಯ್ಯುತ್ತಿದ್ದ ದೃಶ್ಯ ರಾಧಮ್ಮ ಕಣ್ಣಿಗೆ ಬಿದ್ದಿದೆ. ಕೂಡಲೇ ತನ್ನ ಕುರಿಯನ್ನು ರಕ್ಷಿಸಲು ಹೋದಾಗ ರಾಧಮ್ಮ ಮೇಲೆಯೂ ದಾಳಿ ನಡೆಸಲು ಚಿರತೆ ಮುಂದಾಗಿದೆ. ರಾಧಮ್ಮ ಜೋರಾಗಿ ಚೀರಾಡಿದಾಗ ಚಿರತೆ ಕುರಿಯನ್ನು ಗಾಯಪಡಿಸಿ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದೆ.

ಚಿರತೆ ಅಟ್ಟಹಾಸವನ್ನು ಕಣ್ಣಾರೆ ಕಂಡ ರಾಧಮ್ಮ, ಭಯಭೀತರಾಗಿ, ಜ್ವರ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಮನೆಗೆ ಮರಳಿದ್ದಾರೆ.

ಈ ವೇಳೆ ರಾಧಮ್ಮ ಗಂಡ ಯಲ್ಲಪ್ಪ ಮಾತಾಡಿ, ನಮ್ಮೂರಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ನನ್ನ ಮಡದಿ ಚಿರತೆಯನ್ನು ನೋಡಿದ ಕಾರಣ ಜ್ವರ ಬಂದು ಮಲಗಿದ್ದಾರೆ. ನಮ್ಮ ಕುರಿಯ ಕುತ್ತಿಗೆ, ಕಾಲುಗಳಿಗೆ ಕಚ್ಚಿ ಗಾಯಪಡಿಸಿದೆ. ತೀವ್ರವಾಗಿ ಗಾಯಗೊಂಡಿರುವ ಕುರಿ ಬದುಕುಳಿಯುವುದು ತುಂಬಾ ಕಷ್ಟ. ನಮಗಾಗಿರುವ ನಷ್ಟವನ್ನು ಯಾರು ಭರಿಸುತ್ತಾರೆ ಎಂದು ಹೇಳಿದ್ದಾರೆ.

ನಂತರ ಗ್ರಾಮದ ಯುವಕ ರವಿಕುಮಾರ್ ಮಾತನಾಡಿ, ಕೊಟ್ಟಿಗೆಮಾಚೇನಹಳ್ಳಿ ಗ್ರಾಮ ಚಿರತೆ ಹಾವಳಿಯಿಂದ ನಲಗುತ್ತಿದೆ. ನಿನ್ನೆ ರಾತ್ರಿ ಚಿರತೆ ದಾಳಿಗೆ ನಾಲ್ಕು ಕುರಿಗಳು ಬಲಿಯಾಗಿವೆ. ಐದು ಕುರಿಗಳಿಗೆ ಗಾಯಗಳಾಗಿವೆ. ಐದು ಕುರಿಗಳಲ್ಲಿ ಮೂರು ಕುರಿಗಳು ಬದುಕುಳಿಯುವುದು ಕಷ್ಟ. ಇದೀಗ ಇಂದು ಮಧ್ಯಾಹ್ನ ಹಾಡಹಗಲೇ ಮತ್ತೊಂದು ಕುರಿಯ ಮೇಲೆ ದಾಳಿ ನಡೆಸಿದೆ. ಚಿರತೆಯಿಂದ ಮನುಷ್ಯರಿಗೆ ಅನಾಹುತ ಆಗುವ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ನಮ್ಮ ಊರಿನಲ್ಲಿ ಬೋನ್ ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ…..

ನಂತರ ಯುವಕ ಲಕ್ಷ್ಮೀಪತಿ ಮಾತನಾಡಿ, ಚಿರತೆ ಸೆರೆಹಿಡಿಯುವಂತೆ ಸಾಕಷ್ಟು ಬಾರಿ ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದರೂ ಯಾವ ಉಪಯೋಗವಾಗಿಲ್ಲ. ಬೋನ್ ಇರಿಸಲು ಅರಣ್ಯ ಇಲಾಖೆಗೆ ರೈತರು ಅರ್ಜಿ ಕೊಡಬೇಕಂತೆ‌. ಅರ್ಜಿ‌ ಕೊಟ್ಟು ಬೋನ್ ತರಲು ವಾಹನವನ್ನು ರೈತರೇ ಒದಗಿಸಬೇಕಂತೆ. ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಏನೇನೋ ರೂಲ್ಸ್ ರೆಗ್ಯುಲೇಷನ್ ಹೇಳಿ ಕೈತೊಳೆದುಕೊಳ್ಳುತ್ತಾರೆ ಎಂದು ಆರೋಪಿಸಿದರು.

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

6 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

7 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

20 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

20 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

23 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

23 hours ago