ಕೊಟ್ಟಿಗೆಮಾಚೇನಹಳ್ಳಿಯಲ್ಲಿ ಮುಂದುವರಿದ ಚಿರತೆ ಅಟ್ಟಹಾಸ: ಇಂದು ಸಂಜೆ ಮತ್ತೊಂದು ಕುರಿ ಮೇಲೆ ದಾಳಿ ನಡೆಸಿದ ಚಿರತೆ

ದೊಡ್ಡಬಳ್ಳಾಪುರ ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿಯಲ್ಲಿ ಚಿರತೆ ಅಟ್ಟಹಾಸ ಮುಂದುವರಿದಿದೆ. ನಿನ್ನೆ ರಾತ್ರಿಯಷ್ಟೇ ಚಿರತೆ ಊರಿಗೆ ಲಗ್ಗೆ ಇಟ್ಟು ಕೊಟ್ಟಿಗೆಯಲ್ಲಿದ್ದ ಸುಮಾರು 9 ಕುರಿಗಳ ಮೇಲೆ ದಾಳಿ ನಡೆಸಿ 4 ಕುರಿಗಳನ್ನು ಬಲಿ ಪಡೆದಿತ್ತು. ಇದೀಗ ಇಂದು ಸಂಜೆ ಮತ್ತೊಂದು ಕುರಿ ಮೇಲೆ ದಾಳಿ ನಡೆಸಿ ಗಾಯಪಡಿಸಿದೆ.

ರೈತ ಮಹಿಳೆ ರಾಧಮ್ಮ ಎನ್ನುವವರು ತಮ್ಮ ಹೊಲದ ಬಳಿ ಕುರಿಗಳನ್ನು ಮೇಯಲು ಬಿಟ್ಟು ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮಧ್ಯಾಹ್ನ ಸುಮಾರು 3:30ರಲ್ಲಿ ಕುರಿಗಳ ಮೇಲೆ ಚಿರತೆ ಎರಗಿ ಒಂದು ಕುರಿಯನ್ನು ಎಳೆದೊಯ್ಯುತ್ತಿದ್ದ ದೃಶ್ಯ ರಾಧಮ್ಮ ಕಣ್ಣಿಗೆ ಬಿದ್ದಿದೆ. ಕೂಡಲೇ ತನ್ನ ಕುರಿಯನ್ನು ರಕ್ಷಿಸಲು ಹೋದಾಗ ರಾಧಮ್ಮ ಮೇಲೆಯೂ ದಾಳಿ ನಡೆಸಲು ಚಿರತೆ ಮುಂದಾಗಿದೆ. ರಾಧಮ್ಮ ಜೋರಾಗಿ ಚೀರಾಡಿದಾಗ ಚಿರತೆ ಕುರಿಯನ್ನು ಗಾಯಪಡಿಸಿ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದೆ.

ಚಿರತೆ ಅಟ್ಟಹಾಸವನ್ನು ಕಣ್ಣಾರೆ ಕಂಡ ರಾಧಮ್ಮ, ಭಯಭೀತರಾಗಿ, ಜ್ವರ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಮನೆಗೆ ಮರಳಿದ್ದಾರೆ.

ಈ ವೇಳೆ ರಾಧಮ್ಮ ಗಂಡ ಯಲ್ಲಪ್ಪ ಮಾತಾಡಿ, ನಮ್ಮೂರಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ನನ್ನ ಮಡದಿ ಚಿರತೆಯನ್ನು ನೋಡಿದ ಕಾರಣ ಜ್ವರ ಬಂದು ಮಲಗಿದ್ದಾರೆ. ನಮ್ಮ ಕುರಿಯ ಕುತ್ತಿಗೆ, ಕಾಲುಗಳಿಗೆ ಕಚ್ಚಿ ಗಾಯಪಡಿಸಿದೆ. ತೀವ್ರವಾಗಿ ಗಾಯಗೊಂಡಿರುವ ಕುರಿ ಬದುಕುಳಿಯುವುದು ತುಂಬಾ ಕಷ್ಟ. ನಮಗಾಗಿರುವ ನಷ್ಟವನ್ನು ಯಾರು ಭರಿಸುತ್ತಾರೆ ಎಂದು ಹೇಳಿದ್ದಾರೆ.

ನಂತರ ಗ್ರಾಮದ ಯುವಕ ರವಿಕುಮಾರ್ ಮಾತನಾಡಿ, ಕೊಟ್ಟಿಗೆಮಾಚೇನಹಳ್ಳಿ ಗ್ರಾಮ ಚಿರತೆ ಹಾವಳಿಯಿಂದ ನಲಗುತ್ತಿದೆ. ನಿನ್ನೆ ರಾತ್ರಿ ಚಿರತೆ ದಾಳಿಗೆ ನಾಲ್ಕು ಕುರಿಗಳು ಬಲಿಯಾಗಿವೆ. ಐದು ಕುರಿಗಳಿಗೆ ಗಾಯಗಳಾಗಿವೆ. ಐದು ಕುರಿಗಳಲ್ಲಿ ಮೂರು ಕುರಿಗಳು ಬದುಕುಳಿಯುವುದು ಕಷ್ಟ. ಇದೀಗ ಇಂದು ಮಧ್ಯಾಹ್ನ ಹಾಡಹಗಲೇ ಮತ್ತೊಂದು ಕುರಿಯ ಮೇಲೆ ದಾಳಿ ನಡೆಸಿದೆ. ಚಿರತೆಯಿಂದ ಮನುಷ್ಯರಿಗೆ ಅನಾಹುತ ಆಗುವ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ನಮ್ಮ ಊರಿನಲ್ಲಿ ಬೋನ್ ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ…..

ನಂತರ ಯುವಕ ಲಕ್ಷ್ಮೀಪತಿ ಮಾತನಾಡಿ, ಚಿರತೆ ಸೆರೆಹಿಡಿಯುವಂತೆ ಸಾಕಷ್ಟು ಬಾರಿ ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದರೂ ಯಾವ ಉಪಯೋಗವಾಗಿಲ್ಲ. ಬೋನ್ ಇರಿಸಲು ಅರಣ್ಯ ಇಲಾಖೆಗೆ ರೈತರು ಅರ್ಜಿ ಕೊಡಬೇಕಂತೆ‌. ಅರ್ಜಿ‌ ಕೊಟ್ಟು ಬೋನ್ ತರಲು ವಾಹನವನ್ನು ರೈತರೇ ಒದಗಿಸಬೇಕಂತೆ. ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಏನೇನೋ ರೂಲ್ಸ್ ರೆಗ್ಯುಲೇಷನ್ ಹೇಳಿ ಕೈತೊಳೆದುಕೊಳ್ಳುತ್ತಾರೆ ಎಂದು ಆರೋಪಿಸಿದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

2 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago