ಕೊಟ್ಟಿಗೆಮಾಚೇನಹಳ್ಳಿಯಲ್ಲಿ ಮುಂದುವರಿದ ಚಿರತೆ ಅಟ್ಟಹಾಸ: ಇಂದು ಸಂಜೆ ಮತ್ತೊಂದು ಕುರಿ ಮೇಲೆ ದಾಳಿ ನಡೆಸಿದ ಚಿರತೆ

ದೊಡ್ಡಬಳ್ಳಾಪುರ ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿಯಲ್ಲಿ ಚಿರತೆ ಅಟ್ಟಹಾಸ ಮುಂದುವರಿದಿದೆ. ನಿನ್ನೆ ರಾತ್ರಿಯಷ್ಟೇ ಚಿರತೆ ಊರಿಗೆ ಲಗ್ಗೆ ಇಟ್ಟು ಕೊಟ್ಟಿಗೆಯಲ್ಲಿದ್ದ ಸುಮಾರು 9 ಕುರಿಗಳ ಮೇಲೆ ದಾಳಿ ನಡೆಸಿ 4 ಕುರಿಗಳನ್ನು ಬಲಿ ಪಡೆದಿತ್ತು. ಇದೀಗ ಇಂದು ಸಂಜೆ ಮತ್ತೊಂದು ಕುರಿ ಮೇಲೆ ದಾಳಿ ನಡೆಸಿ ಗಾಯಪಡಿಸಿದೆ.

ರೈತ ಮಹಿಳೆ ರಾಧಮ್ಮ ಎನ್ನುವವರು ತಮ್ಮ ಹೊಲದ ಬಳಿ ಕುರಿಗಳನ್ನು ಮೇಯಲು ಬಿಟ್ಟು ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮಧ್ಯಾಹ್ನ ಸುಮಾರು 3:30ರಲ್ಲಿ ಕುರಿಗಳ ಮೇಲೆ ಚಿರತೆ ಎರಗಿ ಒಂದು ಕುರಿಯನ್ನು ಎಳೆದೊಯ್ಯುತ್ತಿದ್ದ ದೃಶ್ಯ ರಾಧಮ್ಮ ಕಣ್ಣಿಗೆ ಬಿದ್ದಿದೆ. ಕೂಡಲೇ ತನ್ನ ಕುರಿಯನ್ನು ರಕ್ಷಿಸಲು ಹೋದಾಗ ರಾಧಮ್ಮ ಮೇಲೆಯೂ ದಾಳಿ ನಡೆಸಲು ಚಿರತೆ ಮುಂದಾಗಿದೆ. ರಾಧಮ್ಮ ಜೋರಾಗಿ ಚೀರಾಡಿದಾಗ ಚಿರತೆ ಕುರಿಯನ್ನು ಗಾಯಪಡಿಸಿ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದೆ.

ಚಿರತೆ ಅಟ್ಟಹಾಸವನ್ನು ಕಣ್ಣಾರೆ ಕಂಡ ರಾಧಮ್ಮ, ಭಯಭೀತರಾಗಿ, ಜ್ವರ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಮನೆಗೆ ಮರಳಿದ್ದಾರೆ.

ಈ ವೇಳೆ ರಾಧಮ್ಮ ಗಂಡ ಯಲ್ಲಪ್ಪ ಮಾತಾಡಿ, ನಮ್ಮೂರಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ನನ್ನ ಮಡದಿ ಚಿರತೆಯನ್ನು ನೋಡಿದ ಕಾರಣ ಜ್ವರ ಬಂದು ಮಲಗಿದ್ದಾರೆ. ನಮ್ಮ ಕುರಿಯ ಕುತ್ತಿಗೆ, ಕಾಲುಗಳಿಗೆ ಕಚ್ಚಿ ಗಾಯಪಡಿಸಿದೆ. ತೀವ್ರವಾಗಿ ಗಾಯಗೊಂಡಿರುವ ಕುರಿ ಬದುಕುಳಿಯುವುದು ತುಂಬಾ ಕಷ್ಟ. ನಮಗಾಗಿರುವ ನಷ್ಟವನ್ನು ಯಾರು ಭರಿಸುತ್ತಾರೆ ಎಂದು ಹೇಳಿದ್ದಾರೆ.

ನಂತರ ಗ್ರಾಮದ ಯುವಕ ರವಿಕುಮಾರ್ ಮಾತನಾಡಿ, ಕೊಟ್ಟಿಗೆಮಾಚೇನಹಳ್ಳಿ ಗ್ರಾಮ ಚಿರತೆ ಹಾವಳಿಯಿಂದ ನಲಗುತ್ತಿದೆ. ನಿನ್ನೆ ರಾತ್ರಿ ಚಿರತೆ ದಾಳಿಗೆ ನಾಲ್ಕು ಕುರಿಗಳು ಬಲಿಯಾಗಿವೆ. ಐದು ಕುರಿಗಳಿಗೆ ಗಾಯಗಳಾಗಿವೆ. ಐದು ಕುರಿಗಳಲ್ಲಿ ಮೂರು ಕುರಿಗಳು ಬದುಕುಳಿಯುವುದು ಕಷ್ಟ. ಇದೀಗ ಇಂದು ಮಧ್ಯಾಹ್ನ ಹಾಡಹಗಲೇ ಮತ್ತೊಂದು ಕುರಿಯ ಮೇಲೆ ದಾಳಿ ನಡೆಸಿದೆ. ಚಿರತೆಯಿಂದ ಮನುಷ್ಯರಿಗೆ ಅನಾಹುತ ಆಗುವ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ನಮ್ಮ ಊರಿನಲ್ಲಿ ಬೋನ್ ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ…..

ನಂತರ ಯುವಕ ಲಕ್ಷ್ಮೀಪತಿ ಮಾತನಾಡಿ, ಚಿರತೆ ಸೆರೆಹಿಡಿಯುವಂತೆ ಸಾಕಷ್ಟು ಬಾರಿ ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದರೂ ಯಾವ ಉಪಯೋಗವಾಗಿಲ್ಲ. ಬೋನ್ ಇರಿಸಲು ಅರಣ್ಯ ಇಲಾಖೆಗೆ ರೈತರು ಅರ್ಜಿ ಕೊಡಬೇಕಂತೆ‌. ಅರ್ಜಿ‌ ಕೊಟ್ಟು ಬೋನ್ ತರಲು ವಾಹನವನ್ನು ರೈತರೇ ಒದಗಿಸಬೇಕಂತೆ. ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಏನೇನೋ ರೂಲ್ಸ್ ರೆಗ್ಯುಲೇಷನ್ ಹೇಳಿ ಕೈತೊಳೆದುಕೊಳ್ಳುತ್ತಾರೆ ಎಂದು ಆರೋಪಿಸಿದರು.

Ramesh Babu

Journalist

Recent Posts

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

1 hour ago

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

5 hours ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

6 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

6 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

17 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

20 hours ago