ಕೊಟ್ಟಿಗೆಮಾಚೇನಹಳ್ಳಿಯಲ್ಲಿ ಕರಡಿ ಹೆಜ್ಜೆ ಗುರುತು ಪತ್ತೆ:‌ ಭಯಭೀತರಾದ ಗ್ರಾಮಸ್ಥರು

ಮಳೆ ಬಂತೆಂದರೆ ಸಾಕು ದೊಡ್ಡಬಳ್ಳಾಪುರ ತಾಲೂಕಿನ ಕಾಡಿನಂಚಿನಲ್ಲಿರುವ ಊರುಗಳಲ್ಲಿ ಚಿರತೆ, ಕರಡಿ ಸೇರಿದಂತೆ ಇತರೆ ಕಾಡು ಪ್ರಾಣಿಗಳ ಹೆಜ್ಜೆ ಗುರುತುಗಳು ಪತ್ತೆಯಾಗುತ್ತಿವೆ.

ಅದರಲ್ಲೂ ಅತಿಹೆಚ್ಚಾಗಿ ಚಿರತೆ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳಾದ ನಾಯಿ, ಮೇಕೆ, ಕುರಿ, ಹಸು‌ ಸೇರಿದಂತೆ ಇನ್ನಿತರೆ ಪ್ರಾಣಿಗಳನ್ನು ಬೇಟೆಯಾಡುತ್ತಿರುತ್ತದೆ.‌  ಇದರ ಜೊತೆಗೆ ಇತ್ತೀಚೆಗೆ ಕರಡಿಯು ಸಹ ಕಾಡಿನಂಚಿನಲ್ಲಿರುವ ಊರುಗಳಲ್ಲಿ ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ….

ನಿನ್ನೆ ರಾತ್ರಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಓಡಾಡಿರುವ ಹೆಜ್ಜೆ ಗುರುತುಗಳು ಗ್ರಾಮಸ್ಥರ ಕಣ್ಣಿಗೆ ಬಿದ್ದಿವೆ. ಕೆಲ ದಿನಗಳಿಂದಷ್ಟೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಕರಡಿ ರೈತನ ಮೇಲೆ ಎರಗಿ ಮೈಯಲ್ಲಿ ಪರಚಿ ಗಾಯಪಡಿಸಿತ್ತು. ಅಂದು ಅದೃಷ್ಟವಶಾತ್ ರೈತ ಕರಡಿ ದಾಳಿಯಿಂದ ಪಾರಾಗಿ ಪ್ರಾಣ ಉಳಿಸಿಕೊಂಡಿದ್ದ. ಇದೀಗ ಕೊಟ್ಟಿಗೆಮಾಚೇನಹಳ್ಳಿಯ ಕರಡಿಗಳ ಹಾವಳಿ ಕಂಡುಬಂದಿದೆ. ಇದರಿಂದ ಗ್ರಾಮಸ್ಥರು ಇನ್ನಷ್ಟು ಭಯಭೀತರಾಗಿದ್ದಾರೆ.

ಈ ಕುರಿತು “ಪಬ್ಲಿಕ್ ಮಿರ್ಚಿ” ಗೆ ಮಾಹಿತಿ ನೀಡಿದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥ ನವೀನ್ ಕುಮಾರ್ ಕೆ.ಡಿ, ಇಂದು ಬೆಳಗ್ಗೆ ಹೊಲದ‌ ಕಡೆ ಬಂದಾಗ ಕರಡಿ ಹೆಜ್ಜೆ ಗುರುತುಗಳು ಕಂಡುಬಂದಿವೆ. ನಿನ್ನೆ ರಾತ್ರಿ ನಮ್ಮ ಊರಿನಲ್ಲಿ ಮಳೆ ಬಿದ್ದಿದೆ. ತೇವದಲ್ಲಿ ಕರಡಿ ಚಲನವಲನದ ಕುರುಕು ಪತ್ತೆಯಾಗಿದೆ. ಹುತ್ತದಲ್ಲಿ ಹುಳ-ಉಪ್ಪಟೆ ಸಿಗಬಹುದು ಎಂದು ಹುತ್ತವನ್ನು ಸಹ ಕೆರೆದಿದೆ ಎಂದು ತಿಳಿಸಿದ್ದಾರೆ.

ಕಾಡಿನಂಚಿನಲ್ಲಿರುವ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಪದೇ ಪದೇ ಜಾನುವಾರುಗಳ ಮೇಲೆ ದಾಳಿ ನಡೆಸಿ ಬಲಿಪಡೆಯುತ್ತಿವೆ. ಜನರ ಮೇಲೂ ದಾಳಿ ನಡೆಸುವ ಸಾಧ್ಯತೆ ಇದೆ. ಆದ್ದರಿಂದ ಇಲ್ಲಿನ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಅರಣ್ಯ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದು ಉಪಯೋಗವಾಗಿಲ್ಲ. ಇನ್ನು ಮುಂದೆಯಾದರೂ ಘೋರ ಅನಾಹುತ ಸಂಭವಿಸುವುದಕ್ಕಿಂತ ಮುನ್ನ ಎಚ್ಚರ ವಹಿಸಿ‌ ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕು ಎಂದು ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥ ರವಿಕುಮಾರ್ ಕೆ.ಎನ್ ಆಗ್ರಹಿಸಿದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

7 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

8 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

10 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

11 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

11 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

12 hours ago