ಕೊಟ್ಟಿಗೆಮಾಚೇನಹಳ್ಳಿಯಲ್ಲಿ ಕರಡಿ ಹೆಜ್ಜೆ ಗುರುತು ಪತ್ತೆ:‌ ಭಯಭೀತರಾದ ಗ್ರಾಮಸ್ಥರು

ಮಳೆ ಬಂತೆಂದರೆ ಸಾಕು ದೊಡ್ಡಬಳ್ಳಾಪುರ ತಾಲೂಕಿನ ಕಾಡಿನಂಚಿನಲ್ಲಿರುವ ಊರುಗಳಲ್ಲಿ ಚಿರತೆ, ಕರಡಿ ಸೇರಿದಂತೆ ಇತರೆ ಕಾಡು ಪ್ರಾಣಿಗಳ ಹೆಜ್ಜೆ ಗುರುತುಗಳು ಪತ್ತೆಯಾಗುತ್ತಿವೆ.

ಅದರಲ್ಲೂ ಅತಿಹೆಚ್ಚಾಗಿ ಚಿರತೆ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳಾದ ನಾಯಿ, ಮೇಕೆ, ಕುರಿ, ಹಸು‌ ಸೇರಿದಂತೆ ಇನ್ನಿತರೆ ಪ್ರಾಣಿಗಳನ್ನು ಬೇಟೆಯಾಡುತ್ತಿರುತ್ತದೆ.‌  ಇದರ ಜೊತೆಗೆ ಇತ್ತೀಚೆಗೆ ಕರಡಿಯು ಸಹ ಕಾಡಿನಂಚಿನಲ್ಲಿರುವ ಊರುಗಳಲ್ಲಿ ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ….

ನಿನ್ನೆ ರಾತ್ರಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಓಡಾಡಿರುವ ಹೆಜ್ಜೆ ಗುರುತುಗಳು ಗ್ರಾಮಸ್ಥರ ಕಣ್ಣಿಗೆ ಬಿದ್ದಿವೆ. ಕೆಲ ದಿನಗಳಿಂದಷ್ಟೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಕರಡಿ ರೈತನ ಮೇಲೆ ಎರಗಿ ಮೈಯಲ್ಲಿ ಪರಚಿ ಗಾಯಪಡಿಸಿತ್ತು. ಅಂದು ಅದೃಷ್ಟವಶಾತ್ ರೈತ ಕರಡಿ ದಾಳಿಯಿಂದ ಪಾರಾಗಿ ಪ್ರಾಣ ಉಳಿಸಿಕೊಂಡಿದ್ದ. ಇದೀಗ ಕೊಟ್ಟಿಗೆಮಾಚೇನಹಳ್ಳಿಯ ಕರಡಿಗಳ ಹಾವಳಿ ಕಂಡುಬಂದಿದೆ. ಇದರಿಂದ ಗ್ರಾಮಸ್ಥರು ಇನ್ನಷ್ಟು ಭಯಭೀತರಾಗಿದ್ದಾರೆ.

ಈ ಕುರಿತು “ಪಬ್ಲಿಕ್ ಮಿರ್ಚಿ” ಗೆ ಮಾಹಿತಿ ನೀಡಿದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥ ನವೀನ್ ಕುಮಾರ್ ಕೆ.ಡಿ, ಇಂದು ಬೆಳಗ್ಗೆ ಹೊಲದ‌ ಕಡೆ ಬಂದಾಗ ಕರಡಿ ಹೆಜ್ಜೆ ಗುರುತುಗಳು ಕಂಡುಬಂದಿವೆ. ನಿನ್ನೆ ರಾತ್ರಿ ನಮ್ಮ ಊರಿನಲ್ಲಿ ಮಳೆ ಬಿದ್ದಿದೆ. ತೇವದಲ್ಲಿ ಕರಡಿ ಚಲನವಲನದ ಕುರುಕು ಪತ್ತೆಯಾಗಿದೆ. ಹುತ್ತದಲ್ಲಿ ಹುಳ-ಉಪ್ಪಟೆ ಸಿಗಬಹುದು ಎಂದು ಹುತ್ತವನ್ನು ಸಹ ಕೆರೆದಿದೆ ಎಂದು ತಿಳಿಸಿದ್ದಾರೆ.

ಕಾಡಿನಂಚಿನಲ್ಲಿರುವ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಪದೇ ಪದೇ ಜಾನುವಾರುಗಳ ಮೇಲೆ ದಾಳಿ ನಡೆಸಿ ಬಲಿಪಡೆಯುತ್ತಿವೆ. ಜನರ ಮೇಲೂ ದಾಳಿ ನಡೆಸುವ ಸಾಧ್ಯತೆ ಇದೆ. ಆದ್ದರಿಂದ ಇಲ್ಲಿನ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಅರಣ್ಯ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದು ಉಪಯೋಗವಾಗಿಲ್ಲ. ಇನ್ನು ಮುಂದೆಯಾದರೂ ಘೋರ ಅನಾಹುತ ಸಂಭವಿಸುವುದಕ್ಕಿಂತ ಮುನ್ನ ಎಚ್ಚರ ವಹಿಸಿ‌ ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕು ಎಂದು ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥ ರವಿಕುಮಾರ್ ಕೆ.ಎನ್ ಆಗ್ರಹಿಸಿದರು.

Ramesh Babu

Journalist

Recent Posts

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

5 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

8 hours ago

Instant Play Casino

Instant play casinos allow you to play casino games online without installing any software. These…

23 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

1 day ago