ಕೊಟ್ಟಿಗೆಮಾಚೇನಹಳ್ಳಿಯಲ್ಲಿ ಕರಡಿ ಹೆಜ್ಜೆ ಗುರುತು ಪತ್ತೆ:‌ ಭಯಭೀತರಾದ ಗ್ರಾಮಸ್ಥರು

ಮಳೆ ಬಂತೆಂದರೆ ಸಾಕು ದೊಡ್ಡಬಳ್ಳಾಪುರ ತಾಲೂಕಿನ ಕಾಡಿನಂಚಿನಲ್ಲಿರುವ ಊರುಗಳಲ್ಲಿ ಚಿರತೆ, ಕರಡಿ ಸೇರಿದಂತೆ ಇತರೆ ಕಾಡು ಪ್ರಾಣಿಗಳ ಹೆಜ್ಜೆ ಗುರುತುಗಳು ಪತ್ತೆಯಾಗುತ್ತಿವೆ.

ಅದರಲ್ಲೂ ಅತಿಹೆಚ್ಚಾಗಿ ಚಿರತೆ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳಾದ ನಾಯಿ, ಮೇಕೆ, ಕುರಿ, ಹಸು‌ ಸೇರಿದಂತೆ ಇನ್ನಿತರೆ ಪ್ರಾಣಿಗಳನ್ನು ಬೇಟೆಯಾಡುತ್ತಿರುತ್ತದೆ.‌  ಇದರ ಜೊತೆಗೆ ಇತ್ತೀಚೆಗೆ ಕರಡಿಯು ಸಹ ಕಾಡಿನಂಚಿನಲ್ಲಿರುವ ಊರುಗಳಲ್ಲಿ ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ….

ನಿನ್ನೆ ರಾತ್ರಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಓಡಾಡಿರುವ ಹೆಜ್ಜೆ ಗುರುತುಗಳು ಗ್ರಾಮಸ್ಥರ ಕಣ್ಣಿಗೆ ಬಿದ್ದಿವೆ. ಕೆಲ ದಿನಗಳಿಂದಷ್ಟೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಕರಡಿ ರೈತನ ಮೇಲೆ ಎರಗಿ ಮೈಯಲ್ಲಿ ಪರಚಿ ಗಾಯಪಡಿಸಿತ್ತು. ಅಂದು ಅದೃಷ್ಟವಶಾತ್ ರೈತ ಕರಡಿ ದಾಳಿಯಿಂದ ಪಾರಾಗಿ ಪ್ರಾಣ ಉಳಿಸಿಕೊಂಡಿದ್ದ. ಇದೀಗ ಕೊಟ್ಟಿಗೆಮಾಚೇನಹಳ್ಳಿಯ ಕರಡಿಗಳ ಹಾವಳಿ ಕಂಡುಬಂದಿದೆ. ಇದರಿಂದ ಗ್ರಾಮಸ್ಥರು ಇನ್ನಷ್ಟು ಭಯಭೀತರಾಗಿದ್ದಾರೆ.

ಈ ಕುರಿತು “ಪಬ್ಲಿಕ್ ಮಿರ್ಚಿ” ಗೆ ಮಾಹಿತಿ ನೀಡಿದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥ ನವೀನ್ ಕುಮಾರ್ ಕೆ.ಡಿ, ಇಂದು ಬೆಳಗ್ಗೆ ಹೊಲದ‌ ಕಡೆ ಬಂದಾಗ ಕರಡಿ ಹೆಜ್ಜೆ ಗುರುತುಗಳು ಕಂಡುಬಂದಿವೆ. ನಿನ್ನೆ ರಾತ್ರಿ ನಮ್ಮ ಊರಿನಲ್ಲಿ ಮಳೆ ಬಿದ್ದಿದೆ. ತೇವದಲ್ಲಿ ಕರಡಿ ಚಲನವಲನದ ಕುರುಕು ಪತ್ತೆಯಾಗಿದೆ. ಹುತ್ತದಲ್ಲಿ ಹುಳ-ಉಪ್ಪಟೆ ಸಿಗಬಹುದು ಎಂದು ಹುತ್ತವನ್ನು ಸಹ ಕೆರೆದಿದೆ ಎಂದು ತಿಳಿಸಿದ್ದಾರೆ.

ಕಾಡಿನಂಚಿನಲ್ಲಿರುವ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಪದೇ ಪದೇ ಜಾನುವಾರುಗಳ ಮೇಲೆ ದಾಳಿ ನಡೆಸಿ ಬಲಿಪಡೆಯುತ್ತಿವೆ. ಜನರ ಮೇಲೂ ದಾಳಿ ನಡೆಸುವ ಸಾಧ್ಯತೆ ಇದೆ. ಆದ್ದರಿಂದ ಇಲ್ಲಿನ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಅರಣ್ಯ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದು ಉಪಯೋಗವಾಗಿಲ್ಲ. ಇನ್ನು ಮುಂದೆಯಾದರೂ ಘೋರ ಅನಾಹುತ ಸಂಭವಿಸುವುದಕ್ಕಿಂತ ಮುನ್ನ ಎಚ್ಚರ ವಹಿಸಿ‌ ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕು ಎಂದು ಕೊಟ್ಟಿಗೆಮಾಚೇನಹಳ್ಳಿ ಗ್ರಾಮಸ್ಥ ರವಿಕುಮಾರ್ ಕೆ.ಎನ್ ಆಗ್ರಹಿಸಿದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago