ಕೊಟ್ಟಿಗೆ ಬಾಗಿಲು ಬೀಗ ಮುರಿದು 2 ಹೆಣ್ಣು‌ಮೇಕೆ, 1 ಗಂಡು‌ ಮೇಕೆಯನ್ನ ಕದ್ದೋಯ್ದಿರುವ ಕಳ್ಳರು

ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿದ್ದ ಮೂರು ಮೇಕೆಗಳನ್ನು ಕಳ್ಳರು ಎಸ್ಕೇಪ್ ಮಾಡಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರಿಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ರೈತ ಕೃಷ್ಣಪ್ಪ ಅವರಿಗೆ ಸೇರಿದ ಸುಮಾರು 60 ಸಾವಿರ ರೂ. ಬೆಲೆಬಾಳುವ ಮೂರು ಮೇಕೆಗಳನ್ನು ಕಳವು ಮಾಡಿದ್ದಾರೆ. ರಾತ್ರಿ ದನದ ಕೊಟ್ಟಿಗೆಯಲ್ಲಿ ಜಾನುವಾರು ಸಮೇತ ಮೇಕೆಗಳನ್ನು ಕಟ್ಟಿಹಾಕಲಾಗಿತ್ತು. ಮಂಗಳವಾರ ಬೆಳಿಗ್ಗೆ ಜಾನುವಾರುಗಳನ್ನು ಹೊರಗೆ ಕಟ್ಟಿಹಾಕಲು ಹೋದಾಗ ಕೊಟ್ಟಿಗೆಯ ಬಾಗಿಲ ಬೀಗ‌ ಮುರಿದು ಎರಡು ಹೆಣ್ಣು‌ಮೇಕೆ, ಒಂದು ಗಂಡು‌ ಮೇಕೆ ಕದ್ದೋಯ್ದಿರುವುದು ಕಂಡು ಬಂದಿದೆ.

ಮೇಕೆ ಕಳ್ಳತನ ಕುರಿತು ದೊಡ್ಡಬೆಳವಂಗಲ ಠಾಣೆಗೆ ದೂರು‌ ನೀಡಿದ್ದು, ಗ್ರಾಮಕ್ಕೆ ದೊಡ್ಡಬೆಳವಂಗಲ ಠಾಣಾ ಪೊಲೀಸರು‌ ಭೇಟಿ ನೀಡಿ‌ ಪರಿಶೀಲಿಸಿದರು.

ತಾಲೂಕಿನ ಹಲವು ಗ್ರಾಮಗಳಲ್ಲಿ ಜಾನುವಾರು ಕಳ್ಳತನದಿಂದ ರೈತರು ಕಂಗಾಲಾಗಿದ್ದಾರೆ. ಒಂದು ಕಡೆ ಚಿರತೆ ಕಾಟ, ಮತ್ತೊಂದು ಕಡೆ ಜಾನುವಾರು ಕಳ್ಳರ ಕಾಟದಿಂದ ರೈತಾಪಿ ಜನರ ಬದುಕು ಅತಂತ್ರವಾಗಿದೆ. ಜಾನುವಾರು ಕಳ್ಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *