ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿದ್ದ ಮೂರು ಮೇಕೆಗಳನ್ನು ಕಳ್ಳರು ಎಸ್ಕೇಪ್ ಮಾಡಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರಿಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ರೈತ ಕೃಷ್ಣಪ್ಪ ಅವರಿಗೆ ಸೇರಿದ ಸುಮಾರು 60 ಸಾವಿರ ರೂ. ಬೆಲೆಬಾಳುವ ಮೂರು ಮೇಕೆಗಳನ್ನು ಕಳವು ಮಾಡಿದ್ದಾರೆ. ರಾತ್ರಿ ದನದ ಕೊಟ್ಟಿಗೆಯಲ್ಲಿ ಜಾನುವಾರು ಸಮೇತ ಮೇಕೆಗಳನ್ನು ಕಟ್ಟಿಹಾಕಲಾಗಿತ್ತು. ಮಂಗಳವಾರ ಬೆಳಿಗ್ಗೆ ಜಾನುವಾರುಗಳನ್ನು ಹೊರಗೆ ಕಟ್ಟಿಹಾಕಲು ಹೋದಾಗ ಕೊಟ್ಟಿಗೆಯ ಬಾಗಿಲ ಬೀಗ ಮುರಿದು ಎರಡು ಹೆಣ್ಣುಮೇಕೆ, ಒಂದು ಗಂಡು ಮೇಕೆ ಕದ್ದೋಯ್ದಿರುವುದು ಕಂಡು ಬಂದಿದೆ.
ತಾಲೂಕಿನ ಹಲವು ಗ್ರಾಮಗಳಲ್ಲಿ ಜಾನುವಾರು ಕಳ್ಳತನದಿಂದ ರೈತರು ಕಂಗಾಲಾಗಿದ್ದಾರೆ. ಒಂದು ಕಡೆ ಚಿರತೆ ಕಾಟ, ಮತ್ತೊಂದು ಕಡೆ ಜಾನುವಾರು ಕಳ್ಳರ ಕಾಟದಿಂದ ರೈತಾಪಿ ಜನರ ಬದುಕು ಅತಂತ್ರವಾಗಿದೆ. ಜಾನುವಾರು ಕಳ್ಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ರೈತರು ಒತ್ತಾಯಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…