ಕೊಟ್ಟಿಗೆ ಬಾಗಿಲು ಬೀಗ ಮುರಿದು 2 ಹೆಣ್ಣು‌ಮೇಕೆ, 1 ಗಂಡು‌ ಮೇಕೆಯನ್ನ ಕದ್ದೋಯ್ದಿರುವ ಕಳ್ಳರು

ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿದ್ದ ಮೂರು ಮೇಕೆಗಳನ್ನು ಕಳ್ಳರು ಎಸ್ಕೇಪ್ ಮಾಡಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರಿಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ರೈತ ಕೃಷ್ಣಪ್ಪ ಅವರಿಗೆ ಸೇರಿದ ಸುಮಾರು 60 ಸಾವಿರ ರೂ. ಬೆಲೆಬಾಳುವ ಮೂರು ಮೇಕೆಗಳನ್ನು ಕಳವು ಮಾಡಿದ್ದಾರೆ. ರಾತ್ರಿ ದನದ ಕೊಟ್ಟಿಗೆಯಲ್ಲಿ ಜಾನುವಾರು ಸಮೇತ ಮೇಕೆಗಳನ್ನು ಕಟ್ಟಿಹಾಕಲಾಗಿತ್ತು. ಮಂಗಳವಾರ ಬೆಳಿಗ್ಗೆ ಜಾನುವಾರುಗಳನ್ನು ಹೊರಗೆ ಕಟ್ಟಿಹಾಕಲು ಹೋದಾಗ ಕೊಟ್ಟಿಗೆಯ ಬಾಗಿಲ ಬೀಗ‌ ಮುರಿದು ಎರಡು ಹೆಣ್ಣು‌ಮೇಕೆ, ಒಂದು ಗಂಡು‌ ಮೇಕೆ ಕದ್ದೋಯ್ದಿರುವುದು ಕಂಡು ಬಂದಿದೆ.

ಮೇಕೆ ಕಳ್ಳತನ ಕುರಿತು ದೊಡ್ಡಬೆಳವಂಗಲ ಠಾಣೆಗೆ ದೂರು‌ ನೀಡಿದ್ದು, ಗ್ರಾಮಕ್ಕೆ ದೊಡ್ಡಬೆಳವಂಗಲ ಠಾಣಾ ಪೊಲೀಸರು‌ ಭೇಟಿ ನೀಡಿ‌ ಪರಿಶೀಲಿಸಿದರು.

ತಾಲೂಕಿನ ಹಲವು ಗ್ರಾಮಗಳಲ್ಲಿ ಜಾನುವಾರು ಕಳ್ಳತನದಿಂದ ರೈತರು ಕಂಗಾಲಾಗಿದ್ದಾರೆ. ಒಂದು ಕಡೆ ಚಿರತೆ ಕಾಟ, ಮತ್ತೊಂದು ಕಡೆ ಜಾನುವಾರು ಕಳ್ಳರ ಕಾಟದಿಂದ ರೈತಾಪಿ ಜನರ ಬದುಕು ಅತಂತ್ರವಾಗಿದೆ. ಜಾನುವಾರು ಕಳ್ಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ರೈತರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago