ಬಾಗಲಕೋಟೆಯಲ್ಲಿ ಏ.29ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಬಾಲಕಿಯೊಬ್ಬಳು ಪ್ರಧಾನಿ ಮೋದಿ ಮತ್ತವರ ತಾಯಿ ಹೀರಾಬೆನ್ ಇದ್ದ ಭಾವಚಿತ್ರವನ್ನು ಮೋದಿಯವರಿಗೆ ಕಾಣಿಸುವಂತೆ ಪ್ರದರ್ಶಿಸಿದರು.
ಬಾಲಕಿಯ ಪ್ರದರ್ಶಿಸಿದ ಭಾವಚಿತ್ರವನ್ನು ಗಮನಿಸಿದ ಪ್ರಧಾನಿ ಮೋದಿ ಭಾಷಣದ ನಡುವೆಯೇ ಅಂಗರಕ್ಷಕರ ಮೂಲಕ ಫೋಟೊವನ್ನು ತರಿಸಿಕೊಂಡರು.
ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಜೊತೆಗಿರುವ ಭಾವಚಿತ್ರವನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಬಾಲಕಿಯ ಹೆಸರು ನಾಗರತ್ನಾ ಮೇಟಿ. ಇವರು ನವನಗರ 42 ನೇ ಸೆಕ್ಟರ್ ನಿವಾಸಿಯಾಗಿದ್ದಾರೆ.
ಫೋಟೊ ಸ್ವೀಕರಿಸಿದ ಬಳಿಕ ಬಾಲಕಿಗೆ ಪತ್ರ ಬರೆಯುವುದಾಗಿ ಮೋದಿ ಹೇಳಿದ್ದರು. ಕೊಟ್ಟ ಮಾತಿನಂತೆ ಯುವತಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಪೋಸ್ಟ್ ಮೂಲಕ ಯುವತಿಗೆ ಇಂದು ಮೋದಿ ಅವರು ಬರೆದ ಪತ್ರ ತಲುಪಿದೆ.
ಪತ್ರದ ವಿವರ..
ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ..
ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ. ಇಂತಿ, ನಿಮ್ಮ ನರೇಂದ್ರ ಮೋದಿ.. ಎಂದು ಉಲ್ಲೇಖಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…