Categories: ರಾಜ್ಯ

ಕೊಟ್ಟ ಮಾತಿನಂತೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ..: ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಯುವತಿಗೆ ಪ್ರಧಾನಿ ಪತ್ರ..

ಬಾಗಲಕೋಟೆಯಲ್ಲಿ ಏ.29ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಬಾಲಕಿಯೊಬ್ಬಳು ಪ್ರಧಾನಿ ಮೋದಿ ಮತ್ತವರ ತಾಯಿ ಹೀರಾಬೆನ್ ಇದ್ದ ಭಾವಚಿತ್ರವನ್ನು ಮೋದಿಯವರಿಗೆ ಕಾಣಿಸುವಂತೆ ಪ್ರದರ್ಶಿಸಿದರು.

ಬಾಲಕಿಯ ಪ್ರದರ್ಶಿಸಿದ ಭಾವಚಿತ್ರವನ್ನು ಗಮನಿಸಿದ ಪ್ರಧಾನಿ ಮೋದಿ ಭಾಷಣದ ನಡುವೆಯೇ ಅಂಗರಕ್ಷಕರ ಮೂಲಕ ಫೋಟೊವನ್ನು ತರಿಸಿಕೊಂಡರು.

ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಜೊತೆಗಿರುವ ಭಾವಚಿತ್ರವನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಬಾಲಕಿಯ ಹೆಸರು ನಾಗರತ್ನಾ ಮೇಟಿ. ಇವರು ನವನಗರ 42 ನೇ ಸೆಕ್ಟರ್ ನಿವಾಸಿಯಾಗಿದ್ದಾರೆ.

ಫೋಟೊ ಸ್ವೀಕರಿಸಿದ ಬಳಿಕ ಬಾಲಕಿಗೆ ಪತ್ರ ಬರೆಯುವುದಾಗಿ ಮೋದಿ ಹೇಳಿದ್ದರು. ಕೊಟ್ಟ ಮಾತಿನಂತೆ ಯುವತಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಪೋಸ್ಟ್ ಮೂಲಕ ಯುವತಿಗೆ ಇಂದು‌ ಮೋದಿ ಅವರು ಬರೆದ ಪತ್ರ ತಲುಪಿದೆ.

ಪತ್ರದ ವಿವರ..

ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ..

ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ. ಇಂತಿ, ನಿಮ್ಮ ನರೇಂದ್ರ ಮೋದಿ.. ಎಂದು ಉಲ್ಲೇಖಿಸಿದ್ದಾರೆ.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago