Categories: ರಾಜ್ಯ

ಕೊಟ್ಟ ಮಾತಿನಂತೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ..: ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಯುವತಿಗೆ ಪ್ರಧಾನಿ ಪತ್ರ..

ಬಾಗಲಕೋಟೆಯಲ್ಲಿ ಏ.29ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಬಾಲಕಿಯೊಬ್ಬಳು ಪ್ರಧಾನಿ ಮೋದಿ ಮತ್ತವರ ತಾಯಿ ಹೀರಾಬೆನ್ ಇದ್ದ ಭಾವಚಿತ್ರವನ್ನು ಮೋದಿಯವರಿಗೆ ಕಾಣಿಸುವಂತೆ ಪ್ರದರ್ಶಿಸಿದರು.

ಬಾಲಕಿಯ ಪ್ರದರ್ಶಿಸಿದ ಭಾವಚಿತ್ರವನ್ನು ಗಮನಿಸಿದ ಪ್ರಧಾನಿ ಮೋದಿ ಭಾಷಣದ ನಡುವೆಯೇ ಅಂಗರಕ್ಷಕರ ಮೂಲಕ ಫೋಟೊವನ್ನು ತರಿಸಿಕೊಂಡರು.

ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಜೊತೆಗಿರುವ ಭಾವಚಿತ್ರವನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಬಾಲಕಿಯ ಹೆಸರು ನಾಗರತ್ನಾ ಮೇಟಿ. ಇವರು ನವನಗರ 42 ನೇ ಸೆಕ್ಟರ್ ನಿವಾಸಿಯಾಗಿದ್ದಾರೆ.

ಫೋಟೊ ಸ್ವೀಕರಿಸಿದ ಬಳಿಕ ಬಾಲಕಿಗೆ ಪತ್ರ ಬರೆಯುವುದಾಗಿ ಮೋದಿ ಹೇಳಿದ್ದರು. ಕೊಟ್ಟ ಮಾತಿನಂತೆ ಯುವತಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಪೋಸ್ಟ್ ಮೂಲಕ ಯುವತಿಗೆ ಇಂದು‌ ಮೋದಿ ಅವರು ಬರೆದ ಪತ್ರ ತಲುಪಿದೆ.

ಪತ್ರದ ವಿವರ..

ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ..

ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ. ಇಂತಿ, ನಿಮ್ಮ ನರೇಂದ್ರ ಮೋದಿ.. ಎಂದು ಉಲ್ಲೇಖಿಸಿದ್ದಾರೆ.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

3 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

15 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

18 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago