ಬಾಗಲಕೋಟೆಯಲ್ಲಿ ಏ.29ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಬಾಲಕಿಯೊಬ್ಬಳು ಪ್ರಧಾನಿ ಮೋದಿ ಮತ್ತವರ ತಾಯಿ ಹೀರಾಬೆನ್ ಇದ್ದ ಭಾವಚಿತ್ರವನ್ನು ಮೋದಿಯವರಿಗೆ ಕಾಣಿಸುವಂತೆ ಪ್ರದರ್ಶಿಸಿದರು.
ಬಾಲಕಿಯ ಪ್ರದರ್ಶಿಸಿದ ಭಾವಚಿತ್ರವನ್ನು ಗಮನಿಸಿದ ಪ್ರಧಾನಿ ಮೋದಿ ಭಾಷಣದ ನಡುವೆಯೇ ಅಂಗರಕ್ಷಕರ ಮೂಲಕ ಫೋಟೊವನ್ನು ತರಿಸಿಕೊಂಡರು.
ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಜೊತೆಗಿರುವ ಭಾವಚಿತ್ರವನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಬಾಲಕಿಯ ಹೆಸರು ನಾಗರತ್ನಾ ಮೇಟಿ. ಇವರು ನವನಗರ 42 ನೇ ಸೆಕ್ಟರ್ ನಿವಾಸಿಯಾಗಿದ್ದಾರೆ.
ಫೋಟೊ ಸ್ವೀಕರಿಸಿದ ಬಳಿಕ ಬಾಲಕಿಗೆ ಪತ್ರ ಬರೆಯುವುದಾಗಿ ಮೋದಿ ಹೇಳಿದ್ದರು. ಕೊಟ್ಟ ಮಾತಿನಂತೆ ಯುವತಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಪೋಸ್ಟ್ ಮೂಲಕ ಯುವತಿಗೆ ಇಂದು ಮೋದಿ ಅವರು ಬರೆದ ಪತ್ರ ತಲುಪಿದೆ.
ಪತ್ರದ ವಿವರ..
ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ..
ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ. ಇಂತಿ, ನಿಮ್ಮ ನರೇಂದ್ರ ಮೋದಿ.. ಎಂದು ಉಲ್ಲೇಖಿಸಿದ್ದಾರೆ.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…