Categories: ರಾಜ್ಯ

ಕೊಟ್ಟ ಮಾತಿನಂತೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ..: ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಯುವತಿಗೆ ಪ್ರಧಾನಿ ಪತ್ರ..

ಬಾಗಲಕೋಟೆಯಲ್ಲಿ ಏ.29ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಬಾಲಕಿಯೊಬ್ಬಳು ಪ್ರಧಾನಿ ಮೋದಿ ಮತ್ತವರ ತಾಯಿ ಹೀರಾಬೆನ್ ಇದ್ದ ಭಾವಚಿತ್ರವನ್ನು ಮೋದಿಯವರಿಗೆ ಕಾಣಿಸುವಂತೆ ಪ್ರದರ್ಶಿಸಿದರು.

ಬಾಲಕಿಯ ಪ್ರದರ್ಶಿಸಿದ ಭಾವಚಿತ್ರವನ್ನು ಗಮನಿಸಿದ ಪ್ರಧಾನಿ ಮೋದಿ ಭಾಷಣದ ನಡುವೆಯೇ ಅಂಗರಕ್ಷಕರ ಮೂಲಕ ಫೋಟೊವನ್ನು ತರಿಸಿಕೊಂಡರು.

ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಜೊತೆಗಿರುವ ಭಾವಚಿತ್ರವನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಬಾಲಕಿಯ ಹೆಸರು ನಾಗರತ್ನಾ ಮೇಟಿ. ಇವರು ನವನಗರ 42 ನೇ ಸೆಕ್ಟರ್ ನಿವಾಸಿಯಾಗಿದ್ದಾರೆ.

ಫೋಟೊ ಸ್ವೀಕರಿಸಿದ ಬಳಿಕ ಬಾಲಕಿಗೆ ಪತ್ರ ಬರೆಯುವುದಾಗಿ ಮೋದಿ ಹೇಳಿದ್ದರು. ಕೊಟ್ಟ ಮಾತಿನಂತೆ ಯುವತಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಪೋಸ್ಟ್ ಮೂಲಕ ಯುವತಿಗೆ ಇಂದು‌ ಮೋದಿ ಅವರು ಬರೆದ ಪತ್ರ ತಲುಪಿದೆ.

ಪತ್ರದ ವಿವರ..

ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ..

ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ. ಇಂತಿ, ನಿಮ್ಮ ನರೇಂದ್ರ ಮೋದಿ.. ಎಂದು ಉಲ್ಲೇಖಿಸಿದ್ದಾರೆ.

Ramesh Babu

Journalist

Recent Posts

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 hour ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

2 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

3 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

5 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

10 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

13 hours ago