ಬಾಗಲಕೋಟೆಯಲ್ಲಿ ಏ.29ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಬಾಲಕಿಯೊಬ್ಬಳು ಪ್ರಧಾನಿ ಮೋದಿ ಮತ್ತವರ ತಾಯಿ ಹೀರಾಬೆನ್ ಇದ್ದ ಭಾವಚಿತ್ರವನ್ನು ಮೋದಿಯವರಿಗೆ ಕಾಣಿಸುವಂತೆ ಪ್ರದರ್ಶಿಸಿದರು.
ಬಾಲಕಿಯ ಪ್ರದರ್ಶಿಸಿದ ಭಾವಚಿತ್ರವನ್ನು ಗಮನಿಸಿದ ಪ್ರಧಾನಿ ಮೋದಿ ಭಾಷಣದ ನಡುವೆಯೇ ಅಂಗರಕ್ಷಕರ ಮೂಲಕ ಫೋಟೊವನ್ನು ತರಿಸಿಕೊಂಡರು.
ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಜೊತೆಗಿರುವ ಭಾವಚಿತ್ರವನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಬಾಲಕಿಯ ಹೆಸರು ನಾಗರತ್ನಾ ಮೇಟಿ. ಇವರು ನವನಗರ 42 ನೇ ಸೆಕ್ಟರ್ ನಿವಾಸಿಯಾಗಿದ್ದಾರೆ.
ಫೋಟೊ ಸ್ವೀಕರಿಸಿದ ಬಳಿಕ ಬಾಲಕಿಗೆ ಪತ್ರ ಬರೆಯುವುದಾಗಿ ಮೋದಿ ಹೇಳಿದ್ದರು. ಕೊಟ್ಟ ಮಾತಿನಂತೆ ಯುವತಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಪೋಸ್ಟ್ ಮೂಲಕ ಯುವತಿಗೆ ಇಂದು ಮೋದಿ ಅವರು ಬರೆದ ಪತ್ರ ತಲುಪಿದೆ.
ಪತ್ರದ ವಿವರ..
ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ..
ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ. ಇಂತಿ, ನಿಮ್ಮ ನರೇಂದ್ರ ಮೋದಿ.. ಎಂದು ಉಲ್ಲೇಖಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…