Categories: ರಾಜ್ಯ

ಕೊಟ್ಟ ಮಾತಿನಂತೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ..: ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಯುವತಿಗೆ ಪ್ರಧಾನಿ ಪತ್ರ..

ಬಾಗಲಕೋಟೆಯಲ್ಲಿ ಏ.29ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಬಾಲಕಿಯೊಬ್ಬಳು ಪ್ರಧಾನಿ ಮೋದಿ ಮತ್ತವರ ತಾಯಿ ಹೀರಾಬೆನ್ ಇದ್ದ ಭಾವಚಿತ್ರವನ್ನು ಮೋದಿಯವರಿಗೆ ಕಾಣಿಸುವಂತೆ ಪ್ರದರ್ಶಿಸಿದರು.

ಬಾಲಕಿಯ ಪ್ರದರ್ಶಿಸಿದ ಭಾವಚಿತ್ರವನ್ನು ಗಮನಿಸಿದ ಪ್ರಧಾನಿ ಮೋದಿ ಭಾಷಣದ ನಡುವೆಯೇ ಅಂಗರಕ್ಷಕರ ಮೂಲಕ ಫೋಟೊವನ್ನು ತರಿಸಿಕೊಂಡರು.

ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಜೊತೆಗಿರುವ ಭಾವಚಿತ್ರವನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಬಾಲಕಿಯ ಹೆಸರು ನಾಗರತ್ನಾ ಮೇಟಿ. ಇವರು ನವನಗರ 42 ನೇ ಸೆಕ್ಟರ್ ನಿವಾಸಿಯಾಗಿದ್ದಾರೆ.

ಫೋಟೊ ಸ್ವೀಕರಿಸಿದ ಬಳಿಕ ಬಾಲಕಿಗೆ ಪತ್ರ ಬರೆಯುವುದಾಗಿ ಮೋದಿ ಹೇಳಿದ್ದರು. ಕೊಟ್ಟ ಮಾತಿನಂತೆ ಯುವತಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಪೋಸ್ಟ್ ಮೂಲಕ ಯುವತಿಗೆ ಇಂದು‌ ಮೋದಿ ಅವರು ಬರೆದ ಪತ್ರ ತಲುಪಿದೆ.

ಪತ್ರದ ವಿವರ..

ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ..

ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ. ಇಂತಿ, ನಿಮ್ಮ ನರೇಂದ್ರ ಮೋದಿ.. ಎಂದು ಉಲ್ಲೇಖಿಸಿದ್ದಾರೆ.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 hour ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 hour ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

4 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

6 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

18 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

18 hours ago