ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ ಪಾರದರ್ಶಕವಾಗಿ ನಡೆಯಬೇಕೆಂದು ರಾಜ್ಯ ಬಿಜೆಪಿ ಆಗ್ರಹಪಡಿಸುತ್ತದೆ ಎಂದರು.
ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವೆ. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ವಿನಯ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಹೇಳಿದ್ದಾರೆ.
ಓಂಶಾಂತಿ🙏
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…