Categories: ಕೊಡಗು

ಕೊಡಗು ಪೊಲೀಸ್ ಯಶಸ್ವಿ ಕಾರ್ಯಾಚರಣೆ: ಅಂತಾರಾಷ್ಟ್ರೀಯ ಏಳು‌ ಮಂದಿ ಡ್ರಗ್ ಫೆಡ್ಲರ್ ಗಳ ಬಂಧನ

 

ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚಾರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಡ್ರಗ್ ಪೆಡ್ಲರನ್ನು ಬಂಧಿಸಿ ಉಳಿದ ಆತನ ಆರು ಸಹಚಾರರನ್ನು ಕೂಡ ಕೊಡಗು ಪೊಲೀಸ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕೆ. ರಾಮರಾಜನ್ ನೀಡಿದ್ದಾರೆ.

*ಬಂದಿತ ಆರೋಪಿಗಳ ವಿವರ*.

ನಾಪೋಕ್ಲು ವಿನ ಅಕಿನಾಸ್ ಎಂ ಎನ್, ರಿಯಾಜ್ ಪಿ. ಎಂ, ವಿರಾಜಪೇಟೆಯ ವಾಜಿದ್ ಸಿ.ಇ, ನಾಪೋಕ್ಲುವಿನ ಯಾಹ್ಯ ಸಿ.ಎಚ್, ವಿರಾಜಪೇಟೆಯ ನಾಸೂರುದ್ದೀನ್ ಎಂ. ಯು, ರಾಹುಫ್ ಎಂ. ಎ, ಪ್ರಕರಣದ ಕೇಂದ್ರ ಬಿಂದು ಕಾಸರಗೋಡು ಜಿಲ್ಲೆಯ ಮೆಹರೂಫ್ ಕೆ. ಎ.

*ಪ್ರಕರಣದ ಬಗ್ಗೆ*. ಥಾಯ್ಲ್ಯಾಂಡ್ ದೇಶದ ಬ್ಯಾಂಕಾಕ್ ನಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮೆಹರೂಫ್ ಎಂಬಾತ ಕೆಫೆ ಒಂದನ್ನು ಇಟ್ಟುಕೊಂಡಿದ್ದು ಆತನಿಂದ ವಿರಾಜಪೇಟೆಯ ರಾಹುಫ್ 23.92024ರಂದು ವಿಮಾನದ ಮೂಲಕ ಥೈಲ್ಯಾಂಡ್ ನಿಂದ ಬೆಂಗಳೂರಿಗೆ ಹೈಡ್ರೋ ಗಾಂಚವನ್ನು ತಂದು ತನ್ನ ಇತರ ಸಹಚಾರರೊಂದಿಗೆ ಮೈಸೂರು ಗೋಣಿಕೊಪ್ಪಕ್ಕೆ ಬೆಳಗಿನ ಜಾವ ಆಗಮಿಸಿ ಗೋಣಿಕೊಪ್ಪಲಿನ ಬೆಳ್ಳಿಯಪ್ಪ ರೆಸಿಡೆನ್ಸಿ ಯಲ್ಲಿ ಕೆಲವರು ತಂಗಿ ನಂತರ ಇತರ ಸಹಚರು ಮಡಿಕೇರಿಯತ್ತ ಗಾಂಜಾ ಸಹಿತ ತೆರಳುತ್ತಿದ್ದ ಸಂದರ್ಭ ಖಚಿತ ಮಾಹಿತಿ ತಿಳಿದ ಡಿ.ಸಿ.ಆರ್.ಬಿ ಪೊಲೀಸ್ ತಂಡ ಜಿಲ್ಲಾ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಂತೆ ಬಂಧಿಸಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ.

ಪ್ರಕರಣದ ಮುಖ್ಯ ರೂವಾರಿ ಮೆಹರೂಫ್ ಕೊಚ್ಚಿನ್ ಮೂಲಕ ಬ್ಯಾಂಕಾಕಿಗೆ ವಿಮಾನದ ಮೂಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಅಲ್ಲಿನ ಪೊಲೀಸ್ ಕಮಿಷನರ್ ಅವರ ಸಹಕಾರದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ಅವರ ತಂಡ ಸೆಪ್ಟೆಂಬರ್ 29ರಂದು ರಾತ್ರಿ 10:30 ಗಂಟೆಗೆ ಬಂಧಿಸಿ ಕೊಡಗಿಗೆ ಕರೆ ತಂದಿದ್ದಾರೆ.

ಅಂತರಾಷ್ಟ್ರೀಯ ಮಟ್ಟದ ಈ ದಂಧೆಯಲ್ಲಿ ಕೊಡಗು ಜಿಲ್ಲೆಯ ನಾಪೋಕ್ಲು ಹಾಗೂ ವಿರಾಜಪೇಟೆ ತಾಲೂಕಿನ ಆರು ಮಂದಿ ಬಾಗಿಗಳಾಗಿದ್ದು ಕೊಡಗು ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಹಲವರು ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗಿಗಳಾಗಿದ್ದಾರೆ ಎಂಬ ಸಂದೇಹಗಳು ಮೂಡಿವೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಜನತೆಯಲ್ಲಿ ಇದೀಗ ಈ ಪ್ರಕರಣ ಆತಂಕ ಮೂಡಲು ಕಾರಣವಾಗಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

4 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

5 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

10 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

11 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

18 hours ago