Categories: ಕೊಡಗು

ಕೊಡಗು ಪೊಲೀಸ್ ಯಶಸ್ವಿ ಕಾರ್ಯಾಚರಣೆ: ಅಂತಾರಾಷ್ಟ್ರೀಯ ಏಳು‌ ಮಂದಿ ಡ್ರಗ್ ಫೆಡ್ಲರ್ ಗಳ ಬಂಧನ

 

ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚಾರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಡ್ರಗ್ ಪೆಡ್ಲರನ್ನು ಬಂಧಿಸಿ ಉಳಿದ ಆತನ ಆರು ಸಹಚಾರರನ್ನು ಕೂಡ ಕೊಡಗು ಪೊಲೀಸ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕೆ. ರಾಮರಾಜನ್ ನೀಡಿದ್ದಾರೆ.

*ಬಂದಿತ ಆರೋಪಿಗಳ ವಿವರ*.

ನಾಪೋಕ್ಲು ವಿನ ಅಕಿನಾಸ್ ಎಂ ಎನ್, ರಿಯಾಜ್ ಪಿ. ಎಂ, ವಿರಾಜಪೇಟೆಯ ವಾಜಿದ್ ಸಿ.ಇ, ನಾಪೋಕ್ಲುವಿನ ಯಾಹ್ಯ ಸಿ.ಎಚ್, ವಿರಾಜಪೇಟೆಯ ನಾಸೂರುದ್ದೀನ್ ಎಂ. ಯು, ರಾಹುಫ್ ಎಂ. ಎ, ಪ್ರಕರಣದ ಕೇಂದ್ರ ಬಿಂದು ಕಾಸರಗೋಡು ಜಿಲ್ಲೆಯ ಮೆಹರೂಫ್ ಕೆ. ಎ.

*ಪ್ರಕರಣದ ಬಗ್ಗೆ*. ಥಾಯ್ಲ್ಯಾಂಡ್ ದೇಶದ ಬ್ಯಾಂಕಾಕ್ ನಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮೆಹರೂಫ್ ಎಂಬಾತ ಕೆಫೆ ಒಂದನ್ನು ಇಟ್ಟುಕೊಂಡಿದ್ದು ಆತನಿಂದ ವಿರಾಜಪೇಟೆಯ ರಾಹುಫ್ 23.92024ರಂದು ವಿಮಾನದ ಮೂಲಕ ಥೈಲ್ಯಾಂಡ್ ನಿಂದ ಬೆಂಗಳೂರಿಗೆ ಹೈಡ್ರೋ ಗಾಂಚವನ್ನು ತಂದು ತನ್ನ ಇತರ ಸಹಚಾರರೊಂದಿಗೆ ಮೈಸೂರು ಗೋಣಿಕೊಪ್ಪಕ್ಕೆ ಬೆಳಗಿನ ಜಾವ ಆಗಮಿಸಿ ಗೋಣಿಕೊಪ್ಪಲಿನ ಬೆಳ್ಳಿಯಪ್ಪ ರೆಸಿಡೆನ್ಸಿ ಯಲ್ಲಿ ಕೆಲವರು ತಂಗಿ ನಂತರ ಇತರ ಸಹಚರು ಮಡಿಕೇರಿಯತ್ತ ಗಾಂಜಾ ಸಹಿತ ತೆರಳುತ್ತಿದ್ದ ಸಂದರ್ಭ ಖಚಿತ ಮಾಹಿತಿ ತಿಳಿದ ಡಿ.ಸಿ.ಆರ್.ಬಿ ಪೊಲೀಸ್ ತಂಡ ಜಿಲ್ಲಾ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಂತೆ ಬಂಧಿಸಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ.

ಪ್ರಕರಣದ ಮುಖ್ಯ ರೂವಾರಿ ಮೆಹರೂಫ್ ಕೊಚ್ಚಿನ್ ಮೂಲಕ ಬ್ಯಾಂಕಾಕಿಗೆ ವಿಮಾನದ ಮೂಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಅಲ್ಲಿನ ಪೊಲೀಸ್ ಕಮಿಷನರ್ ಅವರ ಸಹಕಾರದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ಅವರ ತಂಡ ಸೆಪ್ಟೆಂಬರ್ 29ರಂದು ರಾತ್ರಿ 10:30 ಗಂಟೆಗೆ ಬಂಧಿಸಿ ಕೊಡಗಿಗೆ ಕರೆ ತಂದಿದ್ದಾರೆ.

ಅಂತರಾಷ್ಟ್ರೀಯ ಮಟ್ಟದ ಈ ದಂಧೆಯಲ್ಲಿ ಕೊಡಗು ಜಿಲ್ಲೆಯ ನಾಪೋಕ್ಲು ಹಾಗೂ ವಿರಾಜಪೇಟೆ ತಾಲೂಕಿನ ಆರು ಮಂದಿ ಬಾಗಿಗಳಾಗಿದ್ದು ಕೊಡಗು ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಹಲವರು ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗಿಗಳಾಗಿದ್ದಾರೆ ಎಂಬ ಸಂದೇಹಗಳು ಮೂಡಿವೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಜನತೆಯಲ್ಲಿ ಇದೀಗ ಈ ಪ್ರಕರಣ ಆತಂಕ ಮೂಡಲು ಕಾರಣವಾಗಿದೆ.

Ramesh Babu

Journalist

Recent Posts

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

4 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

10 hours ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

21 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

21 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

1 day ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

1 day ago