ಕೊಡಿಗೇಹಳ್ಳಿ ಎಂಪಿಸಿಎಸ್ ಅಧ್ಯಕ್ಷರಾಗಿ ದೇವರಾಜು ಅವಿರೋಧ ಆಯ್ಕೆ; ಗಣ್ಯರಿಂದ ಅಭಿನಂದನೆ

ತಾಲ್ಲೂಕಿನ ಕಸಬಾ ಹೋಬಳಿಯ ಕೊಡಿಗೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ದೇವರಾಜು ಕೆ.ಸಿ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಅರಸೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಂಘದ ಆವರಣದಲ್ಲಿ ಚುನಾವಣೆ ನಡೆಯಿತು. ದೇವರಾಜು ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಗನ್ನಾಥ ಮುಂದುವರೆದಿದ್ದಾರೆ.

ನೂತನ ಅಧ್ಯಕ್ಷ ದೇವರಾಜು ಮಾತನಾಡಿ, ತಮ್ಮ ಮುಂದಿನ ಎರಡು ವರ್ಷದ ಅಧಿಕಾರದ ಅವಧಿಯಲ್ಲಿ ಯಾವುದೇ ರೀತಿ ಲೋಪದೋಷಗಳು ಆಗದಂತೆ ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಗ್ರಾಮೀಣ ಹಾಲು ಉತ್ಪಾದಕರು ಅನೇಕ ತೊಂದರೆಗಳುನ್ನು ಅನುಭವಿಸುತ್ತಿದ್ದು, ಅವುಗಳ ನಿವಾರಣೆಯತ್ತ ಗಮನ ಹರಿಸಿ ರೈತರ ಹಿತ ಕಾಯುವುದಾಗಿ ಭರವಸೆ ನೀಡಿದರು. ಎಲ್ಲಾ ಸದಸ್ಯರಿಗೆ ಯಶಸ್ವಿನಿ ಯೋಜನೆಯನ್ನು ಮಾಡಿಸಿ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಅರಿವು ಮೂಡಿಸಲಾಗುವುದು.

ಗ್ರಾಮದಲ್ಲಿನ ಬಡವರ ಅನುಕೂಲಕ್ಕೆ ಈ ಯೋಜನೆಯನ್ನು ರೂಪಿಸಲಾಗಿದೆ. ಪ್ರತಿ ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ ಸ್ಥಳೀಯ ರೈತರ ಜೀವನ ಮಟ್ಟ ಮತ್ತು ಅವರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಂಜೀವಿನಿಯಾಗಿದೆ. ರೈತರು ಉತ್ತಮ ತಳಿಯ ಹಸುಗಳನ್ನು ಸಾಕುವುದರ ಜೊತೆಗೆ ಹೈನುಗಾರಿಕೆಯಲ್ಲಿ ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡು ಹೆಚ್ಚಿನ ಲಾಭ ಪಡೆಯಬಹುದು.

ಕೆಎಂಎಫ್ ಮತ್ತು ಬಮೂಲ್ ಗೆ ರೈತರಿಂದ ಖರೀದಿಸುವ ಹಾಲಿಗೆ ಶೀಘ್ರವಾಗಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದರು.

ದೊಡ್ಡಬಳ್ಳಾಪುರದ ಕೊಡಿಗೆಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೇವರಾಜುರನ್ನು ಶಾಸಕ ಧೀರಜ್ ಮುನಿರಾಜು, ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ಬಮೂಲ್ ಮಾಜಿ ನಿರ್ದೇಶಕ ಮುನಿರಾಮೇಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ನಾಗೇಶ್, ಅಶ್ವಥ್ ನಾರಾಯಣ ಮತ್ತಿತರರು ಅಭಿನಂದಿಸಿದರು.

Ramesh Babu

Journalist

Recent Posts

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

10 minutes ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

59 minutes ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

7 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

9 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

12 hours ago

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

23 hours ago