ಕೊಡಿಗೇಹಳ್ಳಿ ಎಂಪಿಸಿಎಸ್ ಅಧ್ಯಕ್ಷರಾಗಿ ದೇವರಾಜು ಅವಿರೋಧ ಆಯ್ಕೆ; ಗಣ್ಯರಿಂದ ಅಭಿನಂದನೆ

ತಾಲ್ಲೂಕಿನ ಕಸಬಾ ಹೋಬಳಿಯ ಕೊಡಿಗೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ದೇವರಾಜು ಕೆ.ಸಿ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಅರಸೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಂಘದ ಆವರಣದಲ್ಲಿ ಚುನಾವಣೆ ನಡೆಯಿತು. ದೇವರಾಜು ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಗನ್ನಾಥ ಮುಂದುವರೆದಿದ್ದಾರೆ.

ನೂತನ ಅಧ್ಯಕ್ಷ ದೇವರಾಜು ಮಾತನಾಡಿ, ತಮ್ಮ ಮುಂದಿನ ಎರಡು ವರ್ಷದ ಅಧಿಕಾರದ ಅವಧಿಯಲ್ಲಿ ಯಾವುದೇ ರೀತಿ ಲೋಪದೋಷಗಳು ಆಗದಂತೆ ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಗ್ರಾಮೀಣ ಹಾಲು ಉತ್ಪಾದಕರು ಅನೇಕ ತೊಂದರೆಗಳುನ್ನು ಅನುಭವಿಸುತ್ತಿದ್ದು, ಅವುಗಳ ನಿವಾರಣೆಯತ್ತ ಗಮನ ಹರಿಸಿ ರೈತರ ಹಿತ ಕಾಯುವುದಾಗಿ ಭರವಸೆ ನೀಡಿದರು. ಎಲ್ಲಾ ಸದಸ್ಯರಿಗೆ ಯಶಸ್ವಿನಿ ಯೋಜನೆಯನ್ನು ಮಾಡಿಸಿ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಅರಿವು ಮೂಡಿಸಲಾಗುವುದು.

ಗ್ರಾಮದಲ್ಲಿನ ಬಡವರ ಅನುಕೂಲಕ್ಕೆ ಈ ಯೋಜನೆಯನ್ನು ರೂಪಿಸಲಾಗಿದೆ. ಪ್ರತಿ ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ ಸ್ಥಳೀಯ ರೈತರ ಜೀವನ ಮಟ್ಟ ಮತ್ತು ಅವರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಂಜೀವಿನಿಯಾಗಿದೆ. ರೈತರು ಉತ್ತಮ ತಳಿಯ ಹಸುಗಳನ್ನು ಸಾಕುವುದರ ಜೊತೆಗೆ ಹೈನುಗಾರಿಕೆಯಲ್ಲಿ ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡು ಹೆಚ್ಚಿನ ಲಾಭ ಪಡೆಯಬಹುದು.

ಕೆಎಂಎಫ್ ಮತ್ತು ಬಮೂಲ್ ಗೆ ರೈತರಿಂದ ಖರೀದಿಸುವ ಹಾಲಿಗೆ ಶೀಘ್ರವಾಗಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದರು.

ದೊಡ್ಡಬಳ್ಳಾಪುರದ ಕೊಡಿಗೆಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೇವರಾಜುರನ್ನು ಶಾಸಕ ಧೀರಜ್ ಮುನಿರಾಜು, ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ಬಮೂಲ್ ಮಾಜಿ ನಿರ್ದೇಶಕ ಮುನಿರಾಮೇಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ನಾಗೇಶ್, ಅಶ್ವಥ್ ನಾರಾಯಣ ಮತ್ತಿತರರು ಅಭಿನಂದಿಸಿದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

14 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago