ಕೊಡಿಗೇಹಳ್ಳಿ ಎಂಪಿಸಿಎಸ್ ಅಧ್ಯಕ್ಷರಾಗಿ ದೇವರಾಜು ಅವಿರೋಧ ಆಯ್ಕೆ; ಗಣ್ಯರಿಂದ ಅಭಿನಂದನೆ

ತಾಲ್ಲೂಕಿನ ಕಸಬಾ ಹೋಬಳಿಯ ಕೊಡಿಗೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ದೇವರಾಜು ಕೆ.ಸಿ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಅರಸೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಂಘದ ಆವರಣದಲ್ಲಿ ಚುನಾವಣೆ ನಡೆಯಿತು. ದೇವರಾಜು ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಗನ್ನಾಥ ಮುಂದುವರೆದಿದ್ದಾರೆ.

ನೂತನ ಅಧ್ಯಕ್ಷ ದೇವರಾಜು ಮಾತನಾಡಿ, ತಮ್ಮ ಮುಂದಿನ ಎರಡು ವರ್ಷದ ಅಧಿಕಾರದ ಅವಧಿಯಲ್ಲಿ ಯಾವುದೇ ರೀತಿ ಲೋಪದೋಷಗಳು ಆಗದಂತೆ ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಗ್ರಾಮೀಣ ಹಾಲು ಉತ್ಪಾದಕರು ಅನೇಕ ತೊಂದರೆಗಳುನ್ನು ಅನುಭವಿಸುತ್ತಿದ್ದು, ಅವುಗಳ ನಿವಾರಣೆಯತ್ತ ಗಮನ ಹರಿಸಿ ರೈತರ ಹಿತ ಕಾಯುವುದಾಗಿ ಭರವಸೆ ನೀಡಿದರು. ಎಲ್ಲಾ ಸದಸ್ಯರಿಗೆ ಯಶಸ್ವಿನಿ ಯೋಜನೆಯನ್ನು ಮಾಡಿಸಿ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಅರಿವು ಮೂಡಿಸಲಾಗುವುದು.

ಗ್ರಾಮದಲ್ಲಿನ ಬಡವರ ಅನುಕೂಲಕ್ಕೆ ಈ ಯೋಜನೆಯನ್ನು ರೂಪಿಸಲಾಗಿದೆ. ಪ್ರತಿ ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ ಸ್ಥಳೀಯ ರೈತರ ಜೀವನ ಮಟ್ಟ ಮತ್ತು ಅವರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಂಜೀವಿನಿಯಾಗಿದೆ. ರೈತರು ಉತ್ತಮ ತಳಿಯ ಹಸುಗಳನ್ನು ಸಾಕುವುದರ ಜೊತೆಗೆ ಹೈನುಗಾರಿಕೆಯಲ್ಲಿ ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡು ಹೆಚ್ಚಿನ ಲಾಭ ಪಡೆಯಬಹುದು.

ಕೆಎಂಎಫ್ ಮತ್ತು ಬಮೂಲ್ ಗೆ ರೈತರಿಂದ ಖರೀದಿಸುವ ಹಾಲಿಗೆ ಶೀಘ್ರವಾಗಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದರು.

ದೊಡ್ಡಬಳ್ಳಾಪುರದ ಕೊಡಿಗೆಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೇವರಾಜುರನ್ನು ಶಾಸಕ ಧೀರಜ್ ಮುನಿರಾಜು, ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ಬಮೂಲ್ ಮಾಜಿ ನಿರ್ದೇಶಕ ಮುನಿರಾಮೇಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ನಾಗೇಶ್, ಅಶ್ವಥ್ ನಾರಾಯಣ ಮತ್ತಿತರರು ಅಭಿನಂದಿಸಿದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 minutes ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 hour ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

10 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago