ತಾಲ್ಲೂಕಿನ ಕಸಬಾ ಹೋಬಳಿಯ ಕೊಡಿಗೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ದೇವರಾಜು ಕೆ.ಸಿ ಬುಧವಾರ ಅವಿರೋಧವಾಗಿ ಆಯ್ಕೆಯಾದರು.
ಅರಸೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಂಘದ ಆವರಣದಲ್ಲಿ ಚುನಾವಣೆ ನಡೆಯಿತು. ದೇವರಾಜು ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಗನ್ನಾಥ ಮುಂದುವರೆದಿದ್ದಾರೆ.
ನೂತನ ಅಧ್ಯಕ್ಷ ದೇವರಾಜು ಮಾತನಾಡಿ, ತಮ್ಮ ಮುಂದಿನ ಎರಡು ವರ್ಷದ ಅಧಿಕಾರದ ಅವಧಿಯಲ್ಲಿ ಯಾವುದೇ ರೀತಿ ಲೋಪದೋಷಗಳು ಆಗದಂತೆ ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಗ್ರಾಮೀಣ ಹಾಲು ಉತ್ಪಾದಕರು ಅನೇಕ ತೊಂದರೆಗಳುನ್ನು ಅನುಭವಿಸುತ್ತಿದ್ದು, ಅವುಗಳ ನಿವಾರಣೆಯತ್ತ ಗಮನ ಹರಿಸಿ ರೈತರ ಹಿತ ಕಾಯುವುದಾಗಿ ಭರವಸೆ ನೀಡಿದರು. ಎಲ್ಲಾ ಸದಸ್ಯರಿಗೆ ಯಶಸ್ವಿನಿ ಯೋಜನೆಯನ್ನು ಮಾಡಿಸಿ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಅರಿವು ಮೂಡಿಸಲಾಗುವುದು.
ಗ್ರಾಮದಲ್ಲಿನ ಬಡವರ ಅನುಕೂಲಕ್ಕೆ ಈ ಯೋಜನೆಯನ್ನು ರೂಪಿಸಲಾಗಿದೆ. ಪ್ರತಿ ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ ಸ್ಥಳೀಯ ರೈತರ ಜೀವನ ಮಟ್ಟ ಮತ್ತು ಅವರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಂಜೀವಿನಿಯಾಗಿದೆ. ರೈತರು ಉತ್ತಮ ತಳಿಯ ಹಸುಗಳನ್ನು ಸಾಕುವುದರ ಜೊತೆಗೆ ಹೈನುಗಾರಿಕೆಯಲ್ಲಿ ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡು ಹೆಚ್ಚಿನ ಲಾಭ ಪಡೆಯಬಹುದು.
ಕೆಎಂಎಫ್ ಮತ್ತು ಬಮೂಲ್ ಗೆ ರೈತರಿಂದ ಖರೀದಿಸುವ ಹಾಲಿಗೆ ಶೀಘ್ರವಾಗಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದರು.
ದೊಡ್ಡಬಳ್ಳಾಪುರದ ಕೊಡಿಗೆಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೇವರಾಜುರನ್ನು ಶಾಸಕ ಧೀರಜ್ ಮುನಿರಾಜು, ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ಬಮೂಲ್ ಮಾಜಿ ನಿರ್ದೇಶಕ ಮುನಿರಾಮೇಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ನಾಗೇಶ್, ಅಶ್ವಥ್ ನಾರಾಯಣ ಮತ್ತಿತರರು ಅಭಿನಂದಿಸಿದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…