ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ ಕೈಗಾರಿಕೋದ್ಯಮಿ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಆದರೆ, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಅಚ್ಚರಿ ವಿಷಯವಾದರೂ ರತನ್ ಟಾಟಾ ಅವರು ತಮ್ಮ ಜೀವನದಲ್ಲಿ ಮದುವೆಯೇ ಆಗಲಿಲ್ಲ. ಈ ಹಿಂದೆ ನಾಲ್ಕೈದು ಬಾರಿ ಮದುವೆ ಚರ್ಚೆ ಬಂದಿತ್ಥಾದರೂ ರತನ್ ಅವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ.
1961 ರಲ್ಲಿ ತಮ್ಮ ವೃತ್ತಿ ಜೀವನವನ್ನು ರತನ್ ಟಾಟಾ ಪ್ರಾರಂಭಿಸಿದರು. ಟಾಟಾ ಸ್ಟೀಲ್ಸ್ ಮಹಡಿಯಲ್ಲಿ ಸ್ವತಃ ತಾವೇ ಕೆಲಸ ಮಾಡುವ ಮೂಲಕ ತಳಮಟ್ಟದಿಂದ ಕೆಲಸ ಕಲಿತು ಅದರ ಅನುಭವದಿಂದ ಮೇಲೆ ಬಂದರು. ಇದು ಅವರ ಭವಿಷ್ಯದ ನಿರ್ಧಾರಗಳಿಗೆ ದೊಡ್ಡಮಟ್ಟಿನಲ್ಲಿ ನೆರವಾಯಿತು ಎಂದು ಅವರೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.
2024 ರಲ್ಲಿ ಅವರ ಒಟ್ಟಾರೆ ನಿವ್ವಳ ಆಸ್ತಿ ಮೊತ್ತವು 3800 ಕೋಟಿ ರೂಪಾಯಿ ಆಗುತ್ತದೆ. ರತನ್ ಟಾಟಾ ಅವರು ತಮ್ಮ ಸಂಪಾದನೆಯ ಶೇ 60 ಕ್ಕೂ ಹೆಚ್ಚು ಹಣವನ್ನು ಟಾಟಾ ಚಾರಿಟಿಗೆ (ದಾನ) ನೀಡುತ್ತಿದ್ದರು. ದೇಶದ ಕೋವಿಡ್ ಹೋರಾಟಕ್ಕೆ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…