ದೂರದೃಷ್ಟಿಯುಳ್ಳ, ಕೊಡುಗೈ ದಾನಿ, ಉದ್ಯಮ‌ ಲೋಕದ ದಿಗ್ಗಜ, ಸರಳ ಸಜ್ಜನಿಕೆ ವ್ಯಕ್ತಿತ್ವದ ರತನ್ ಟಾಟಾ ಇನ್ನಿಲ್ಲ

ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಕೈಗಾರಿಕೋದ್ಯಮಿ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಆದರೆ, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟಾಟಾ ಗ್ರೂಪ್ ಅನ್ನು ಸ್ಥಾಪಿಸಿದ ಜಮ್‌ಸೆಟ್ಜಿ ಟಾಟಾ ಅವರ ಮರಿ ಮೊಮ್ಮಗ ರತನ್ ನೇವಲ್ ಟಾಟಾ. ಡಿಸೆಂಬರ್ 28, 1937 ರಂದು ಮುಂಬೈನಲ್ಲಿ ಜನಸಿದ್ದು, ಇವರ ತಂದೆ ನೇವಲ್ ಟಾಟಾ ಮತ್ತು ತಾಯಿ ಸೂನಿ ಟಾಟಾ.

ಅಚ್ಚರಿ ವಿಷಯವಾದರೂ ರತನ್‌ ಟಾಟಾ ಅವರು ತಮ್ಮ ಜೀವನದಲ್ಲಿ ಮದುವೆಯೇ ಆಗಲಿಲ್ಲ. ಈ ಹಿಂದೆ ನಾಲ್ಕೈದು ಬಾರಿ ಮದುವೆ ಚರ್ಚೆ ಬಂದಿತ್ಥಾದರೂ ರತನ್ ಅವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ.

1961 ರಲ್ಲಿ ತಮ್ಮ ವೃತ್ತಿ ಜೀವನವನ್ನು ರತನ್‌ ಟಾಟಾ ಪ್ರಾರಂಭಿಸಿದರು. ಟಾಟಾ ಸ್ಟೀಲ್ಸ್‌ ಮಹಡಿಯಲ್ಲಿ ಸ್ವತಃ ತಾವೇ ಕೆಲಸ ಮಾಡುವ ಮೂಲಕ ತಳಮಟ್ಟದಿಂದ ಕೆಲಸ ಕಲಿತು ಅದರ ಅನುಭವದಿಂದ ಮೇಲೆ ಬಂದರು. ಇದು ಅವರ ಭವಿಷ್ಯದ ನಿರ್ಧಾರಗಳಿಗೆ ದೊಡ್ಡಮಟ್ಟಿನಲ್ಲಿ ನೆರವಾಯಿತು ಎಂದು ಅವರೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.

ಜನರಿಗೆ ಅನುಕೂಲವಾಗುವ ಮನೆ ಮಾತಾಗಿರುವ ಟಾಟಾ ಟೀ, ಟಾಟಾ ಮೋಟಾರ್ಸ್ ಮತ್ತು ಟಾಟಾ ಸ್ಟೀಲ್ ಸ್ಥಾಪಿಸಿದ್ದು ರತನ್‌ ಟಾಟಾ. ಉದ್ಯಮ ಸಾಧನೆ, ಸೇವಾ ಕಾರ್ಯಕ್ಕೆ ಮೆಚ್ಚಿ ಕೇಂದ್ರ ಸರ್ಕಾರವು ಪದ್ಮಭೂಷಣ, ಪದ್ಮ ವಿಭೂಷಣ ನೀಡಿ ಗೌರವಿಸಿದೆ.

2024 ರಲ್ಲಿ ಅವರ ಒಟ್ಟಾರೆ ನಿವ್ವಳ ಆಸ್ತಿ ಮೊತ್ತವು 3800 ಕೋಟಿ ರೂಪಾಯಿ ಆಗುತ್ತದೆ. ರತನ್‌ ಟಾಟಾ ಅವರು ತಮ್ಮ ಸಂಪಾದನೆಯ ಶೇ 60 ಕ್ಕೂ ಹೆಚ್ಚು ಹಣವನ್ನು ಟಾಟಾ ಚಾರಿಟಿಗೆ (ದಾನ) ನೀಡುತ್ತಿದ್ದರು. ದೇಶದ ಕೋವಿಡ್‌ ಹೋರಾಟಕ್ಕೆ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

Ramesh Babu

Journalist

Recent Posts

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

9 hours ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

9 hours ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

10 hours ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

11 hours ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

22 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

23 hours ago