ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ ಕೈಗಾರಿಕೋದ್ಯಮಿ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಆದರೆ, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಅಚ್ಚರಿ ವಿಷಯವಾದರೂ ರತನ್ ಟಾಟಾ ಅವರು ತಮ್ಮ ಜೀವನದಲ್ಲಿ ಮದುವೆಯೇ ಆಗಲಿಲ್ಲ. ಈ ಹಿಂದೆ ನಾಲ್ಕೈದು ಬಾರಿ ಮದುವೆ ಚರ್ಚೆ ಬಂದಿತ್ಥಾದರೂ ರತನ್ ಅವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ.
1961 ರಲ್ಲಿ ತಮ್ಮ ವೃತ್ತಿ ಜೀವನವನ್ನು ರತನ್ ಟಾಟಾ ಪ್ರಾರಂಭಿಸಿದರು. ಟಾಟಾ ಸ್ಟೀಲ್ಸ್ ಮಹಡಿಯಲ್ಲಿ ಸ್ವತಃ ತಾವೇ ಕೆಲಸ ಮಾಡುವ ಮೂಲಕ ತಳಮಟ್ಟದಿಂದ ಕೆಲಸ ಕಲಿತು ಅದರ ಅನುಭವದಿಂದ ಮೇಲೆ ಬಂದರು. ಇದು ಅವರ ಭವಿಷ್ಯದ ನಿರ್ಧಾರಗಳಿಗೆ ದೊಡ್ಡಮಟ್ಟಿನಲ್ಲಿ ನೆರವಾಯಿತು ಎಂದು ಅವರೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.
2024 ರಲ್ಲಿ ಅವರ ಒಟ್ಟಾರೆ ನಿವ್ವಳ ಆಸ್ತಿ ಮೊತ್ತವು 3800 ಕೋಟಿ ರೂಪಾಯಿ ಆಗುತ್ತದೆ. ರತನ್ ಟಾಟಾ ಅವರು ತಮ್ಮ ಸಂಪಾದನೆಯ ಶೇ 60 ಕ್ಕೂ ಹೆಚ್ಚು ಹಣವನ್ನು ಟಾಟಾ ಚಾರಿಟಿಗೆ (ದಾನ) ನೀಡುತ್ತಿದ್ದರು. ದೇಶದ ಕೋವಿಡ್ ಹೋರಾಟಕ್ಕೆ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…