ದೂರದೃಷ್ಟಿಯುಳ್ಳ, ಕೊಡುಗೈ ದಾನಿ, ಉದ್ಯಮ‌ ಲೋಕದ ದಿಗ್ಗಜ, ಸರಳ ಸಜ್ಜನಿಕೆ ವ್ಯಕ್ತಿತ್ವದ ರತನ್ ಟಾಟಾ ಇನ್ನಿಲ್ಲ

ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಕೈಗಾರಿಕೋದ್ಯಮಿ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಆದರೆ, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟಾಟಾ ಗ್ರೂಪ್ ಅನ್ನು ಸ್ಥಾಪಿಸಿದ ಜಮ್‌ಸೆಟ್ಜಿ ಟಾಟಾ ಅವರ ಮರಿ ಮೊಮ್ಮಗ ರತನ್ ನೇವಲ್ ಟಾಟಾ. ಡಿಸೆಂಬರ್ 28, 1937 ರಂದು ಮುಂಬೈನಲ್ಲಿ ಜನಸಿದ್ದು, ಇವರ ತಂದೆ ನೇವಲ್ ಟಾಟಾ ಮತ್ತು ತಾಯಿ ಸೂನಿ ಟಾಟಾ.

ಅಚ್ಚರಿ ವಿಷಯವಾದರೂ ರತನ್‌ ಟಾಟಾ ಅವರು ತಮ್ಮ ಜೀವನದಲ್ಲಿ ಮದುವೆಯೇ ಆಗಲಿಲ್ಲ. ಈ ಹಿಂದೆ ನಾಲ್ಕೈದು ಬಾರಿ ಮದುವೆ ಚರ್ಚೆ ಬಂದಿತ್ಥಾದರೂ ರತನ್ ಅವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ.

1961 ರಲ್ಲಿ ತಮ್ಮ ವೃತ್ತಿ ಜೀವನವನ್ನು ರತನ್‌ ಟಾಟಾ ಪ್ರಾರಂಭಿಸಿದರು. ಟಾಟಾ ಸ್ಟೀಲ್ಸ್‌ ಮಹಡಿಯಲ್ಲಿ ಸ್ವತಃ ತಾವೇ ಕೆಲಸ ಮಾಡುವ ಮೂಲಕ ತಳಮಟ್ಟದಿಂದ ಕೆಲಸ ಕಲಿತು ಅದರ ಅನುಭವದಿಂದ ಮೇಲೆ ಬಂದರು. ಇದು ಅವರ ಭವಿಷ್ಯದ ನಿರ್ಧಾರಗಳಿಗೆ ದೊಡ್ಡಮಟ್ಟಿನಲ್ಲಿ ನೆರವಾಯಿತು ಎಂದು ಅವರೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.

ಜನರಿಗೆ ಅನುಕೂಲವಾಗುವ ಮನೆ ಮಾತಾಗಿರುವ ಟಾಟಾ ಟೀ, ಟಾಟಾ ಮೋಟಾರ್ಸ್ ಮತ್ತು ಟಾಟಾ ಸ್ಟೀಲ್ ಸ್ಥಾಪಿಸಿದ್ದು ರತನ್‌ ಟಾಟಾ. ಉದ್ಯಮ ಸಾಧನೆ, ಸೇವಾ ಕಾರ್ಯಕ್ಕೆ ಮೆಚ್ಚಿ ಕೇಂದ್ರ ಸರ್ಕಾರವು ಪದ್ಮಭೂಷಣ, ಪದ್ಮ ವಿಭೂಷಣ ನೀಡಿ ಗೌರವಿಸಿದೆ.

2024 ರಲ್ಲಿ ಅವರ ಒಟ್ಟಾರೆ ನಿವ್ವಳ ಆಸ್ತಿ ಮೊತ್ತವು 3800 ಕೋಟಿ ರೂಪಾಯಿ ಆಗುತ್ತದೆ. ರತನ್‌ ಟಾಟಾ ಅವರು ತಮ್ಮ ಸಂಪಾದನೆಯ ಶೇ 60 ಕ್ಕೂ ಹೆಚ್ಚು ಹಣವನ್ನು ಟಾಟಾ ಚಾರಿಟಿಗೆ (ದಾನ) ನೀಡುತ್ತಿದ್ದರು. ದೇಶದ ಕೋವಿಡ್‌ ಹೋರಾಟಕ್ಕೆ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

4 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

12 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

22 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

24 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago