ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ ಕೈಗಾರಿಕೋದ್ಯಮಿ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಆದರೆ, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಅಚ್ಚರಿ ವಿಷಯವಾದರೂ ರತನ್ ಟಾಟಾ ಅವರು ತಮ್ಮ ಜೀವನದಲ್ಲಿ ಮದುವೆಯೇ ಆಗಲಿಲ್ಲ. ಈ ಹಿಂದೆ ನಾಲ್ಕೈದು ಬಾರಿ ಮದುವೆ ಚರ್ಚೆ ಬಂದಿತ್ಥಾದರೂ ರತನ್ ಅವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ.
1961 ರಲ್ಲಿ ತಮ್ಮ ವೃತ್ತಿ ಜೀವನವನ್ನು ರತನ್ ಟಾಟಾ ಪ್ರಾರಂಭಿಸಿದರು. ಟಾಟಾ ಸ್ಟೀಲ್ಸ್ ಮಹಡಿಯಲ್ಲಿ ಸ್ವತಃ ತಾವೇ ಕೆಲಸ ಮಾಡುವ ಮೂಲಕ ತಳಮಟ್ಟದಿಂದ ಕೆಲಸ ಕಲಿತು ಅದರ ಅನುಭವದಿಂದ ಮೇಲೆ ಬಂದರು. ಇದು ಅವರ ಭವಿಷ್ಯದ ನಿರ್ಧಾರಗಳಿಗೆ ದೊಡ್ಡಮಟ್ಟಿನಲ್ಲಿ ನೆರವಾಯಿತು ಎಂದು ಅವರೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.
2024 ರಲ್ಲಿ ಅವರ ಒಟ್ಟಾರೆ ನಿವ್ವಳ ಆಸ್ತಿ ಮೊತ್ತವು 3800 ಕೋಟಿ ರೂಪಾಯಿ ಆಗುತ್ತದೆ. ರತನ್ ಟಾಟಾ ಅವರು ತಮ್ಮ ಸಂಪಾದನೆಯ ಶೇ 60 ಕ್ಕೂ ಹೆಚ್ಚು ಹಣವನ್ನು ಟಾಟಾ ಚಾರಿಟಿಗೆ (ದಾನ) ನೀಡುತ್ತಿದ್ದರು. ದೇಶದ ಕೋವಿಡ್ ಹೋರಾಟಕ್ಕೆ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…