ದೂರದೃಷ್ಟಿಯುಳ್ಳ, ಕೊಡುಗೈ ದಾನಿ, ಉದ್ಯಮ‌ ಲೋಕದ ದಿಗ್ಗಜ, ಸರಳ ಸಜ್ಜನಿಕೆ ವ್ಯಕ್ತಿತ್ವದ ರತನ್ ಟಾಟಾ ಇನ್ನಿಲ್ಲ

ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಕೈಗಾರಿಕೋದ್ಯಮಿ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಆದರೆ, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟಾಟಾ ಗ್ರೂಪ್ ಅನ್ನು ಸ್ಥಾಪಿಸಿದ ಜಮ್‌ಸೆಟ್ಜಿ ಟಾಟಾ ಅವರ ಮರಿ ಮೊಮ್ಮಗ ರತನ್ ನೇವಲ್ ಟಾಟಾ. ಡಿಸೆಂಬರ್ 28, 1937 ರಂದು ಮುಂಬೈನಲ್ಲಿ ಜನಸಿದ್ದು, ಇವರ ತಂದೆ ನೇವಲ್ ಟಾಟಾ ಮತ್ತು ತಾಯಿ ಸೂನಿ ಟಾಟಾ.

ಅಚ್ಚರಿ ವಿಷಯವಾದರೂ ರತನ್‌ ಟಾಟಾ ಅವರು ತಮ್ಮ ಜೀವನದಲ್ಲಿ ಮದುವೆಯೇ ಆಗಲಿಲ್ಲ. ಈ ಹಿಂದೆ ನಾಲ್ಕೈದು ಬಾರಿ ಮದುವೆ ಚರ್ಚೆ ಬಂದಿತ್ಥಾದರೂ ರತನ್ ಅವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ.

1961 ರಲ್ಲಿ ತಮ್ಮ ವೃತ್ತಿ ಜೀವನವನ್ನು ರತನ್‌ ಟಾಟಾ ಪ್ರಾರಂಭಿಸಿದರು. ಟಾಟಾ ಸ್ಟೀಲ್ಸ್‌ ಮಹಡಿಯಲ್ಲಿ ಸ್ವತಃ ತಾವೇ ಕೆಲಸ ಮಾಡುವ ಮೂಲಕ ತಳಮಟ್ಟದಿಂದ ಕೆಲಸ ಕಲಿತು ಅದರ ಅನುಭವದಿಂದ ಮೇಲೆ ಬಂದರು. ಇದು ಅವರ ಭವಿಷ್ಯದ ನಿರ್ಧಾರಗಳಿಗೆ ದೊಡ್ಡಮಟ್ಟಿನಲ್ಲಿ ನೆರವಾಯಿತು ಎಂದು ಅವರೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.

ಜನರಿಗೆ ಅನುಕೂಲವಾಗುವ ಮನೆ ಮಾತಾಗಿರುವ ಟಾಟಾ ಟೀ, ಟಾಟಾ ಮೋಟಾರ್ಸ್ ಮತ್ತು ಟಾಟಾ ಸ್ಟೀಲ್ ಸ್ಥಾಪಿಸಿದ್ದು ರತನ್‌ ಟಾಟಾ. ಉದ್ಯಮ ಸಾಧನೆ, ಸೇವಾ ಕಾರ್ಯಕ್ಕೆ ಮೆಚ್ಚಿ ಕೇಂದ್ರ ಸರ್ಕಾರವು ಪದ್ಮಭೂಷಣ, ಪದ್ಮ ವಿಭೂಷಣ ನೀಡಿ ಗೌರವಿಸಿದೆ.

2024 ರಲ್ಲಿ ಅವರ ಒಟ್ಟಾರೆ ನಿವ್ವಳ ಆಸ್ತಿ ಮೊತ್ತವು 3800 ಕೋಟಿ ರೂಪಾಯಿ ಆಗುತ್ತದೆ. ರತನ್‌ ಟಾಟಾ ಅವರು ತಮ್ಮ ಸಂಪಾದನೆಯ ಶೇ 60 ಕ್ಕೂ ಹೆಚ್ಚು ಹಣವನ್ನು ಟಾಟಾ ಚಾರಿಟಿಗೆ (ದಾನ) ನೀಡುತ್ತಿದ್ದರು. ದೇಶದ ಕೋವಿಡ್‌ ಹೋರಾಟಕ್ಕೆ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

4 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

15 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

15 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago