ದೂರದೃಷ್ಟಿಯುಳ್ಳ, ಕೊಡುಗೈ ದಾನಿ, ಉದ್ಯಮ‌ ಲೋಕದ ದಿಗ್ಗಜ, ಸರಳ ಸಜ್ಜನಿಕೆ ವ್ಯಕ್ತಿತ್ವದ ರತನ್ ಟಾಟಾ ಇನ್ನಿಲ್ಲ

ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಕೈಗಾರಿಕೋದ್ಯಮಿ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಆದರೆ, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟಾಟಾ ಗ್ರೂಪ್ ಅನ್ನು ಸ್ಥಾಪಿಸಿದ ಜಮ್‌ಸೆಟ್ಜಿ ಟಾಟಾ ಅವರ ಮರಿ ಮೊಮ್ಮಗ ರತನ್ ನೇವಲ್ ಟಾಟಾ. ಡಿಸೆಂಬರ್ 28, 1937 ರಂದು ಮುಂಬೈನಲ್ಲಿ ಜನಸಿದ್ದು, ಇವರ ತಂದೆ ನೇವಲ್ ಟಾಟಾ ಮತ್ತು ತಾಯಿ ಸೂನಿ ಟಾಟಾ.

ಅಚ್ಚರಿ ವಿಷಯವಾದರೂ ರತನ್‌ ಟಾಟಾ ಅವರು ತಮ್ಮ ಜೀವನದಲ್ಲಿ ಮದುವೆಯೇ ಆಗಲಿಲ್ಲ. ಈ ಹಿಂದೆ ನಾಲ್ಕೈದು ಬಾರಿ ಮದುವೆ ಚರ್ಚೆ ಬಂದಿತ್ಥಾದರೂ ರತನ್ ಅವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ.

1961 ರಲ್ಲಿ ತಮ್ಮ ವೃತ್ತಿ ಜೀವನವನ್ನು ರತನ್‌ ಟಾಟಾ ಪ್ರಾರಂಭಿಸಿದರು. ಟಾಟಾ ಸ್ಟೀಲ್ಸ್‌ ಮಹಡಿಯಲ್ಲಿ ಸ್ವತಃ ತಾವೇ ಕೆಲಸ ಮಾಡುವ ಮೂಲಕ ತಳಮಟ್ಟದಿಂದ ಕೆಲಸ ಕಲಿತು ಅದರ ಅನುಭವದಿಂದ ಮೇಲೆ ಬಂದರು. ಇದು ಅವರ ಭವಿಷ್ಯದ ನಿರ್ಧಾರಗಳಿಗೆ ದೊಡ್ಡಮಟ್ಟಿನಲ್ಲಿ ನೆರವಾಯಿತು ಎಂದು ಅವರೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.

ಜನರಿಗೆ ಅನುಕೂಲವಾಗುವ ಮನೆ ಮಾತಾಗಿರುವ ಟಾಟಾ ಟೀ, ಟಾಟಾ ಮೋಟಾರ್ಸ್ ಮತ್ತು ಟಾಟಾ ಸ್ಟೀಲ್ ಸ್ಥಾಪಿಸಿದ್ದು ರತನ್‌ ಟಾಟಾ. ಉದ್ಯಮ ಸಾಧನೆ, ಸೇವಾ ಕಾರ್ಯಕ್ಕೆ ಮೆಚ್ಚಿ ಕೇಂದ್ರ ಸರ್ಕಾರವು ಪದ್ಮಭೂಷಣ, ಪದ್ಮ ವಿಭೂಷಣ ನೀಡಿ ಗೌರವಿಸಿದೆ.

2024 ರಲ್ಲಿ ಅವರ ಒಟ್ಟಾರೆ ನಿವ್ವಳ ಆಸ್ತಿ ಮೊತ್ತವು 3800 ಕೋಟಿ ರೂಪಾಯಿ ಆಗುತ್ತದೆ. ರತನ್‌ ಟಾಟಾ ಅವರು ತಮ್ಮ ಸಂಪಾದನೆಯ ಶೇ 60 ಕ್ಕೂ ಹೆಚ್ಚು ಹಣವನ್ನು ಟಾಟಾ ಚಾರಿಟಿಗೆ (ದಾನ) ನೀಡುತ್ತಿದ್ದರು. ದೇಶದ ಕೋವಿಡ್‌ ಹೋರಾಟಕ್ಕೆ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

14 minutes ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

23 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago